[ವಿಜಯ ಕರ್ನಾಟಕ ಪತ್ರಿಕೆಯ "ಒಂದು ಸೊನ್ನ" ಅಂಕಣದಲ್ಲಿ ಪ್ರಕಟವಾದ ಲೇಖನ]
ಒಂದು ಸೊನ್ನೆ - ೪ (೧೮-೦೭-೨೦೦೩)
June 10, 2026
[ವಿಜಯ ಕರ್ನಾಟಕ ಪತ್ರಿಕೆಯ "ಒಂದು ಸೊನ್ನ" ಅಂಕಣದಲ್ಲಿ ಪ್ರಕಟವಾದ ಲೇಖನ]
ಒಂದು ಸೊನ್ನೆ - ೪ (೧೮-೦೭-೨೦೦೩)
ಸ್ಟೀರಿಯೋ ಸಿಸ್ಟಮ್ ಕೊಳ್ಳಲು ಅಂಗಡಿಗೆ ಹೋಗಿದ್ದೀರಾ? ಅಂಗಡಿಯಾತ ಕೇಳುವ ಪ್ರಶ್ನೆ "ನಿಮಗೆ ಎಷ್ಟು ವಾಟ್ನ ಸಿಸ್ಟಮ್ ಬೇಕು?". ಅಥವಾ ಆತನೇ ಒಂದೊಂದಾಗಿ ತನ್ನಲ್ಲಿರುವ ಸ್ಟೀರಿಯೋಗಳನ್ನು ತೋರಿಸುತ್ತಾ ಹೋಗುತ್ತಾನೆ. ಪ್ರತಿ ಸ್ಟೀರಿಯೋವನ್ನು ತೋರಿಸುವಾಗಲೂ ಮರೆಯದೆ ಹೇಳುವ ಮಾತು ಅದು ಎಷ್ಟು ವಾಟ್ನದು ಎಂದು. "ಸಾರ್, ಇದು 1000 ವಾಟ್, ಇದು 2000 ವಾಟ್,..." ಹೀಗೆ ಗುಣಗಾನ ಸಾಗುತ್ತಿರುತ್ತದೆ. ಹೆಚ್ಚಿನ ಗ್ರಾಹಕರೂ ಸ್ಟೀರಿಯೋ ಕೊಳ್ಳುವಾಗ ಮುಖ್ಯವಾಗಿ ಗಮನಿಸುವುದು ಅದು ಎಷ್ಟು ವಾಟ್ನದು ಎಂದು. ಈ ವಾಟ್ ಎಂದರೆ ಏನು?
ಜಾಗತಿಕ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಕರ್ನಾಟಕ ಅದರಲ್ಲೂ ಕರ್ನಾಟಕದ ರಾಜಧಾನಿಯಾದ ಬೆಂಗಳೂರು ಹೆಸರು ಮಾಡಿದೆ. ಮಾಹಿತಿ ತಂತ್ರಜ್ಞಾನ ಒಂದು ಉದ್ದಿಮೆಯಾಗಿ ಕಳೆದ ಹತ್ತು ವರ್ಷಗಳಲ್ಲಿ ಯಾರೂ ಎಂದೂ ಕಂಡರಿಯದ ಕೇಳರಿಯದ ಮಟ್ಟಕ್ಕೆ ಅತಿ ವೇಗದಲ್ಲಿ ಏರಿ ಅಷ್ಟೇ ವೇಗದಲ್ಲಿ ಕೆಳಗೆ ಕುಸಿದು ಇದೀಗ ಪುನಃ ಚೇತರಿಸಿಕೊಳ್ಳುತ್ತಿದೆ. ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಈ ಎಲ್ಲ ಬೆಳವಣಿಗೆ ಮತ್ತು ಕುಸಿತಗಳಲ್ಲಿ ಬೆಂಗಳೂರು ವಿಶೇಷತಃ ಭಾಗಿಯಾಗಿದೆ.
(ವಿಜಯ ಕರ್ನಾಟಕ ಪತ್ರಿಕೆಯ "ಒಂದು ಸೊನ್ನೆ" ಅಂಕಣದಲ್ಲಿ ಪ್ರಕಟವಾದ ಲೇಖನ)
(ಒಂದು ಸೊನ್ನೆ - ೦೩, ೪-೭-೨೦೦೩)
ವಾಣಿಜ್ಯ ಕ್ಷೇತ್ರದಲ್ಲಿ ಬೇರೆ ಬೇರೆ ಕಂಪೆನಿಗಳು ಒಂದಾಗುವುದು, ಒಂದು ಕಂಪೆನಿ ಇನ್ನೊಂದನ್ನು ನುಂಗುವುದು, ಆಗಾಗ ಜರುಗುತ್ತಲೇ ಇರುತ್ತದೆ. ಉದಾಹರಣೆಗೆ ಅಡೋಬ್ ಮತ್ತು ಮಾಕ್ರೋಮೀಡಿಯಾ ಒಂದಾಗಿರುವುದು. ಇಂತಹ ಹೊಂದಾಣಿಕೆಗೆಳ ಬಗ್ಗೆಯೇ ಹಲವು ಜೋಕುಗಳೂ ಚಾಲ್ತಿಯಲ್ಲಿವೆ. ಉದಾಹರಣೆಗೆ -
[ವಿಜಯ ಕರ್ನಾಟಕದ "ಒಂದು ಸೊನ್ನೆ" ಅಂಕಣದಲ್ಲಿ ಪ್ರಕಟವಾದ ಲೇಖನ]
[ಒಂದು ಸೊನ್ನೆ - ೨ (೨೦-೦೬-೨೦೦೩)]
[ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ "ಒಂದು ಸೊನ್ನೆ" ಹೆಸರಿನ ಅಂಕಣದಲ್ಲಿ ಪ್ರಕಟವಾದ ಲೇಖನ]
ಅನನ್ಯವು ಹನ್ನೊಂದು ವರ್ಷಗಳಿಂದ ಕಲೆ, ಸಂಸ್ಕೃತಿಗೆ ಸಂಬಂಧಿಸಿದ ವಿಷಯಾಧಾರಿತ ಕ್ಯಾಲೆಂಡರನ್ನು ಹೊರತರುತ್ತಿದೆ. ಕರ್ನಾಟಕದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು, ಕನ್ನಡದ ಖ್ಯಾತ ಕವಿಗಳ ಕವನಗಳಿಗೆ ಎಸ್.ಜಿ. ವಾಸುದೇವ್ರವರ ರೇಖಾ ಚಿತ್ರಗಳು, ಕರ್ನಾಟಕ ಹಾಗೂ ಹಿಂದೂಸ್ತಾನಿ ಸಂಗೀತ ಕ್ಷೇತ್ರದ ಹೆಸರಾಂತ ಕಲಾವಿದರು, ಸ್ವರಮಾಲಾ, ರಾಗಮಾಲಾ ಚಿತ್ರಗಳು, ಯಕ್ಷಗಾನ ಕಲಾವಿದರ ಚಿತ್ರಗಳು, ನೃತ್ಯ ಕ್ಷೇತ್ರದ ಪ್ರಬುದ್ಧರ ಮಾಹಿತಿಯೊಂದಿಗಿನ ಭಾವ ಚಿತ್ರಗಳು, ಹೀಗೆ ಹತ್ತು ಹಲವು ವಿಷಯಗಳನ್ನು ಆಯ್ದು ಅವುಗಳ ಬಗ್ಗೆ ವಿವರಣೆಯೊಂದಿಗೆ, ದೃಶ್ಯ ರೂಪದಲ್ಲಿಯೂ ಆಸಕ್ತರನ್ನು ತಲುಪಿಸುವ ಪ್ರಯತ್ನ ನಡೆದಿದೆ. ಕಲೆ ಹಾಗೂ ಕಲೆಯ ಸಾಂಸ್ಕೃತಿಕ ರಾಯಭಾರಿಗಳನ್ನು ಪರಿಚಯಿಸುವುದನ್ನೂ ಈ ಮೂಲಕ ಅನನ್ಯ ಮಾಡುತ್ತಿದೆ.
2006ರ ಸಾಲಿಗೆ ಭರತನಾಟ್ಯದ 'ಮುದ್ರೆ’ ಗಳನ್ನು ಒಳಗೊಂಡಿರುವ ಕಪ್ಪು-ಬಿಳುಪಿನ 16 ಪುಟದ ಕ್ಯಾಲೆಂಡರನ್ನು ಹೊರತರುತ್ತಿದ್ದು, ಇದಕ್ಕೆ ಮೂಲ ಸಾಮಗ್ರಿಯಾಗಿ ಹಿರಿಯ ಛಾಯಾಚಿತ್ರ-ಪತ್ರಕರ್ತರಾದ ಕೆ.ಎನ್. ರಾಘವೇಂದ್ರರಾಯರು ಚೆನ್ನೈನ ಕಲಾಕ್ಷೇತ್ರದಲ್ಲಿ ಸೆರೆಹಿಡಿದ ಚಿತ್ರಗಳನ್ನು ಬಳಸಿಕೊಳ್ಳಲಾಗಿದೆ. ಲೋಕಾರ್ಪಣೆಯು ನವೆಂಬರ್ 20ರಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರು ಗಾಯನ ಸಮಾಜದ ಸಭಾಂಗಣದಲ್ಲಿ ನಡೆಯಲಿದೆ. ಕಲಾಕ್ಷೇತ್ರದ ನಿವೃತ್ತ ನಿರ್ದೇಶಕರಾದ ಶ್ರೀ ರಾಜಾರಾಂ ರವರು ಮುಖ್ಯ ಅತಿಥಿಗಳಾಗಿದ್ದು ಹಿರಿಯ ನೃತ್ಯಗುರು ಭಾನುಮತಿಯವರು ಪ್ರಥಮ ಪ್ರತಿಯನ್ನು ಸ್ವೀಕರಿಸುವರು. ಅನನ್ಯದ ಅಧ್ಯಕ್ಷರಾದ ಡಾ. ಯು. ಆರ್. ಅನಂತ ಮೂರ್ತಿಗಳು ಸಮಾರಂಭದ ಅಧ್ಯಕ್ಷತೆಯನ್ನು ವಹಿಸುವರು.
ಇದೇ ಸಂದರ್ಭದಲ್ಲಿ ಡಾ. ಟಿ. ಎಸ್. ಸತ್ಯವತಿಯವರ ಮಾರ್ಗದರ್ಶನದಲ್ಲಿ ವೃಂದ ವೇಣುವಾದನ ಹಾಗೂ ಗುರು ಭಾನುಮತಿಯವರ ನಿರ್ದೇಶನದ ‘ಭರತಾಂಜಲಿ’ ಮತ್ತು ಶ್ರೀಮತಿ ಅನುರಾಧಾ ವಿಕ್ರಾಂತ್ ರವರಿಂದ ನೃತ್ಯ ಕಾರ್ಯಕ್ರಮವಿದೆ. ಕ್ಯಾಲೆಂಡರ್ನ ಮಾರಾಟದಿಂದ ಬರುವ ಸಂಪೂರ್ಣ ಹಣವನ್ನು ‘ಅನನ್ಯ ಸಂಗ್ರಹ’ದ ಅಭಿವೃದ್ಧಿಗೆ ಉಪಯೋಗಿಸಲಾಗುವುದು. ಎಲ್ಲಾ ಕಲಾರಸಿಕರಿಗೂ ಈ ಕಾರ್ಯಕ್ರಮಕ್ಕೆ ಮುಕ್ತ ಪ್ರವೇಶವಿದೆ.

ಅನನ್ಯ ದಿನದರ್ಶಿಕೆ - ೨೦೦೪
-ಡಾ| ಯು.ಬಿ. ಪವನಜ ಕೆಲವು ಉದಾಹರಣೆಗಳನ್ನು ಗಮನಿಸಿ: ೧. ಮುಂಬಯಿಯಿಂದ ಬೆಂಗಳೂರಿಗೆ ಹೋಗುತ್ತಿರುವ ವಿಮಾನ. ಚಿಕ್ಕಪ್ರಾಯದ ದಂಪತಿಗಳು ಸುಮಾರು ೩ ವರ್ಷ ಪ್ರಾಯದ ಮಗುವಿನ ಜೊತೆ ಕೂತಿದ್ದಾರೆ. ವಿಮಾನ ಪ್ರಯಾಣದ ಸಮಯದಲ್ಲಿ ಗಂಡ ಓದುತ್ತಿದ್ದುದು…