Press "Enter" to skip to content

Posts published in November 2005

ಕೋಡ್ ಕೋಡ್ ಎಲ್ನೋಡಿ ಕೋಡ್

ಕಾರ್ ಕಾರ್ ಹಾಡಿನ ಧಾಟಿಯಲ್ಲಿ...

ಕೋಡ್ ಕೋಡ್ ಕೋಡ್ ಕೋಡ್ ಎಲ್ನೋಡಿ ಕೋಡ್
ಕೋಡ್ ಕೋಡ್ ಕೋಡ್ ಕೋಡ್ ಎಲ್ನೋಡಿ ಕೋಡ್

ಕರ್ನಾಟಕ ಜನಪದ ಕಲೆಗಳು – ಭಾಗ ೮

ಸಂ: ಗೊ. ರು. ಚನ್ನಬಸಪ್ಪ

ಭೂತಾರಾಧನೆ:

ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ವಿಶಿಷ್ಟವಾಗಿ ಕಂಡುಬರುವ ಸಂಪ್ರದಾಯ `ಭೂತಾರಾಧನೆ'. ದುಷ್ಟಶಕ್ತಿಗಳಾದ ದೆವ್ವ, ಪೀಡೆ, ಪಿಶಾಚಿಗಳ ತೊಂದರೆಯಿಂದ ತಪ್ಪಿಸಿಕೊಳ್ಳುವುದಕ್ಕಾಗಿ ಅವುಗಳನ್ನು ಒಲಿಸಿಕೊಳ್ಳಲು ಭಯಭಕ್ತಿಯಿಂದ ಪೂಜಿಸುವುದೇ ಭೂತಾರಾಧನೆ.

ಕರ್ನಾಟಕ ಜನಪದ ಕಲೆಗಳು – ಭಾಗ ೭

ಸಂ: ಗೊ. ರು. ಚನ್ನಬಸಪ್ಪ

ಕರಗ:


ಕರಗದ ಕಲೆಯ ಹುಟ್ಟನ್ನು ಕುರಿತು ನಿರ್ದಿಷ್ಟವಾದ ಮಾಹಿತಿ ದೊರೆಯುವುದಿಲ್ಲವಾದರೂ ಕರಗದ ಕಲಾವಿದರು ಕೊಡುವ ಆಧಾರದಿಂದ ಇದರ ಹಿನ್ನಲೆಯ ಬಗ್ಗೆ ಒಂದು ಸ್ಥೂಲ ಕಲ್ಪನೆ ಬರುತ್ತದೆ. ಒಂದು ನಂಬಿಕೆಯ ಪ್ರಕಾರ, ಕುರುಕ್ಷೇತ್ರ ಯುದ್ಧಾನಂತರ ಪಾಂಡವರ ಸ್ವರ್ಗಾರೋಹಣ ಸಂದರ್ಭದಲ್ಲಿ ಪತಿಗಳನ್ನು ಹಿಂಬಾಲಿಸುತ್ತಿದ್ದ ದ್ರೌಪದಿ ಮೂರ್ಛೆ ಹೋದಳು. ಎಚ್ಚರಗೊಂಡು ನೋಡಿದಾಗ ಪತಿಗಳಿಲ್ಲದುದನ್ನು ಕಂಡು ಭಯದಿಂದ ರೋದಿಸುತ್ತಿದ್ದಳು. ಅದೇ ಸಂದರ್ಭಕ್ಕೆ ತಿಮಿರಾಸುರನೆಂಬ ರಕ್ಕಸ ಆಕೆಯನ್ನು ಪೀಡಿಸಲು ಅವನ ನಿಗ್ರಹದ ಸಲುವಾಗಿ ಆಕೆಯಲ್ಲಿ ವಿಶೇಷ ಶಕ್ತಿ ಮೈದಾಳಿತು. ವಿರಾಟರೂಪವನ್ನು ತಾಳಿದ ಆಕೆಯ ತಲೆಯ ಮೇಲೆ ಕುಂಭವನ್ನು ಧರಿಸಿದ್ದಳು. ಅಂದಿನ ಕುಂಭವೇ ಇಂದು ಆರಾಧಿಸಲ್ಪಡುತ್ತಿರುವ `ಕರಗ'! ಎರಡನೆಯ ನಂಬಿಕೆಯಂತೆ, ಮತ್ಸ್ಯಯಂತ್ರವನ್ನು ಭೇದಿಸಿದ ಅರ್ಜುನನನ್ನು ವರಿಸಿದ ದ್ರೌಪದಿ, ನಂತರ ಕುಂತಿಯ ಅಭಿಲಾಷೆಯಂತೆ ಉಳಿದ ನಾಲ್ವರು ಪಾಂಡವರನ್ನು ವಿವಾಹವಾದಳು. ಆ ಸಂದರ್ಭದಲ್ಲಿ ಆನಂದಾತಿಶಯದಿಂದ ಕೈಯಲ್ಲಿದ್ದ ಕಳಸವನ್ನು ತಲೆಯ ಮೇಲೆ ಧರಿಸಿದಳು. ಆ ಕಳಸವೇ ಇಂದಿನ ಆರಾಧನೆಯ `ಕರಗ'!

ಕರ್ನಾಟಕ ಜನಪದ ಕಲೆಗಳು – ಭಾಗ ೬

ಸಂ: ಗೊ. ರು. ಚನ್ನಬಸಪ್ಪ

ಯಕ್ಷಗಾನ:

ಯಕ್ಷಗಾನ ಗೀತ-ವಾದ್ಯ-ನೃತ್ಯಗಳ ಸಮ್ಮಿಶ್ರ ಕಲೆ. ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಂiಲ್ಲಿ ಮನೆಮಾತಾಗಿರುವ ಈ ಬಯಲಾಟದ ಕಲೆ ತನ್ನದೇ ಆದ ವೈಶಿಷ್ಟ್ಯವನ್ನು ಉಳಿಸಿಕೊಂಡು ಬಂದಿದೆ. ಬಯಲುನಾಡಿನಲ್ಲಿ ಇದನ್ನು `ಮೂಡಲ ಪಾಯ' ಎಂದು ಕರೆದರೆ ಕರಾವಳಿ ಪ್ರದೇಶದಲ್ಲಿ `ಪಡುವಲ ಪಾಯ' ಎನ್ನುತ್ತಾರೆ. ಪಡುವಲ ಪಾಯದಲ್ಲಿ ತೆಂಕ ತಿಟ್ಟು ಹಾಗೂ ಬಡಗ ತಿಟ್ಟು ಎಂಬ ಎರಡು ಪ್ರಭೇದಗಳಿದ್ದು, ಇವುಗಳು ಮೂಲಸ್ವರೂಪದಲ್ಲಿ ಒಂದೇ ಆಗಿದ್ದರೂ ಬೆಳೆದು ಬಂದ ಪ್ರಾದೇಶಿಕ ಪರಿಸರ ಭಿನ್ನತೆಯಿಂದ ಈ ಹೆಸರುಗಳು ಬಳಕೆಯಲ್ಲಿ ಬಂದಿವೆ. ಇದು ಹವ್ಯಾಸಿ ಕಲೆಯಾಗಿರುವಂತೆ ವೃತ್ತಿಕಲೆಯೂ ಆಗಿದೆ.

ಕರ್ನಾಟಕ ಜನಪದ ಕಲೆಗಳು – ಭಾಗ ೫

ಸಂ: ಗೊ. ರು. ಚನ್ನಬಸಪ್ಪ

ಸೂತ್ರದ ಗೊಂಬೆಯಾಟ:

ಜನಪದ ಕಲಾಕ್ಷೇತ್ರದ ಅದರಲ್ಲೂ ಜನಪದ ರಂಗಭೂಮಿಯ ಒಂದು ಚಮತ್ಕಾರಯುತ ಆಕರ್ಷಕ ಕಲೆ ಸೂತ್ರದ ಗೊಂಬೆ. ಹೆಸರೇ ಹೇಳುವಂತೆ ಇಲ್ಲಿ ಸೂತ್ರ, ಗೊಂಬೆ ಮತ್ತು ಸೂತ್ರಧಾರ ಪ್ರಮುಖ. ಜೀವಂತ ವ್ಯಕ್ತಿಗಳಿಗೆ ಬದಲಾಗಿ ಗೊಂಬೆಗಳನ್ನು ಸೂತ್ರದ ಹಿಡಿತದಲ್ಲಿ ತನ್ನ ಕೈಚಳಕದಿಂದ ಆಡಿಸಿ ತೋರಿಸುವ ಸೂತ್ರಧಾರನ ಕಲಾಕುಶಲತೆ ಮೆಚ್ಚತಕ್ಕದ್ದು. ವಿಶೇಷವೆಂದರೆ ಸೂತ್ರಧಾರ ತೆರೆಯ ಮರೆಯಲ್ಲೇ ಇದ್ದು ಕೇವಲ ಗೊಂಬೆಗಳಿಂದ ಅಭಿನಯ ಪ್ರದರ್ಶನ ಮಾಡಿಸುವುದು. ದೂರದಿಂದ ನೋಡುವ ಪ್ರೇಕ್ಷಕರಿಗೆ ರಂಗ ಸಜ್ಜಿಕೆಯ ಮೇಲೆ ಪಾತ್ರದ ಸಂದರ್ಭಕ್ಕನುಗುಣವಾಗಿ ಗೊಂಬೆಗಳು ಬಂದು ಪ್ರದರ್ಶನ ನೀಡಿ ಹೋಗುವುದು ಮಾತ್ರ ಕಾಣುತ್ತದೆ. ಸೂತ್ರದ ಹಿಡಿತದಲ್ಲಿ ಆಡುತ್ತಿರುವುದು ಕಾಣಿಸುವುದಿಲ್ಲ. ಆಧುನಿಕ ರೀತಿಯ ಚಲನಚಿತ್ರಗಳ ಪ್ರವೇಶವಾಗುವ ಮೊದಲು ಕಾಲಿರಿಸಿದ ಮೂಕಿ ಚಿತ್ರಗಳನ್ನು ನೆನಪಿಗೆ ತರುವ ಈ ಕಲೆ ಆ ಚಿತ್ರಗಳಿಗಿಂತ ಅನೇಕ ಪಾಲು ಆಕರ್ಷಕ ರೀತಿಯಲ್ಲಿ ಕಂಡು ಬರುತ್ತದೆ. ಈ ಕಲೆಯನ್ನು `ಪುತ್ಥಳಿ ಗೊಂಬೆಯಾಟ'ವೆಂದೂ ಕರೆಯುತ್ತಾರೆ.

ಕರ್ನಾಟಕ ಜನಪದ ಕಲೆಗಳು – ಭಾಗ ೪

ಸಂ: ಗೊ. ರು. ಚನ್ನಬಸಪ್ಪ

ಲಂಬಾಣಿ ಕುಣಿತ:


ಕರ್ನಾಟಕದಲ್ಲಿ `ಲಂಬಾಣಿ' ಒಂದು ವಿಶಿಷ್ಟ ಜನಾಂಗ. ರಾಜಾಸ್ಥಾನದ ಪರಂಪರೆಯವರೆಂದು ಹೇಳಲಾಗುವ ಈ ಜನ ಕರ್ನಾಟಕದ ನಾನಾ ಭಾಗಗಳಲ್ಲಿ ಹರಡಿಕೊಂಡಿದ್ದಾರೆ. ಇವರಿಗೆ `ಬಂಜಾರ', `ಬಜಾಲಿಂಗ','ಸುಕಾಲಿಗ',`ಲಮಾಣಿ' ಎಂಬ ಹೆಸರುಗಳೂ ಇವೆ.

ಕರ್ನಾಟಕ ಜನಪದ ಕಲೆಗಳು – ಭಾಗ ೩

ಸಂ: ಗೊ. ರು. ಚನ್ನಬಸಪ್ಪ

ವೀರಗಾಸೆ:

'ವೀರಗಾಸೆ' ಕುಣಿತದ ಹಿನ್ನಲೆ ಬಗ್ಗೆ ಪ್ರಚಲಿತವಿರುವ ಒಂದು ಪೌರಾಣಿಕ ಪ್ರಸಂಗ ಹೀಗಿದೆ: "ಹಿಂದೆ ದಕ್ಷಬ್ರಹ್ಮನಿಗೂ ಅವನ ಅಳಿಯನಾದ ಈಶ್ವರನಿಗೂ ವೈರತ್ವ ಬಂದು ದಕ್ಷಬ್ರಹ್ಮನು ತಾನು ಮಾಡುವ ಯಾಗಕ್ಕೆ ಈಶ್ವರನನ್ನು ಬಿಟ್ಟು ಉಳಿದ ದೇವಾನುದೇವತೆಗಳನ್ನು ಆಹ್ವಾನಿಸುತ್ತಾನೆ. ಯಜ್ಞದಲ್ಲಿ ಈಶ್ವರನಿಗೆ ನ್ಯಾಯವಾಗಿ ಸಲ್ಲಬೇಕಾದ ಆವಿರ್ಭಾಗವನ್ನು ಕೊಡದೆ ತಿರಸ್ಕರಿಸುತ್ತಾನೆ. ಈಶ್ವರನು ಬೇಡವೆಂದರೂ ತಂದೆ ಮಾಡುವ ಯಾಗದಲ್ಲಿ ಭಾಗವಹಿಸಲು ಪಾರ್ವತಿ ಬರುತ್ತಾಳೆ. ದಕ್ಷಬ್ರಹ್ಮ ಅಳಿಯನ ಮೇಲಿನ ಕೋಪದಿಂದ, ಮಗಳೆಂಬ ಮಮತೆಯನ್ನೂ ತೊರೆದು, ಕಂಡೂ ಕಾಣದಂತೆ ತಿರಸ್ಕಾರವಾಗಿ ಕಾಣುತ್ತಾನೆ. ಅವಳೆದುರಿಗೆ ಈಶ್ವರನನ್ನು ನಿಂದಿಸುತ್ತಾನೆ. ಇದನ್ನು ಕೇಳಿದ ಪಾರ್ವತಿ ಸಹಿಸಲಾಗದೆ, ಪತಿನಿಂದೆಯನ್ನು ಹೊತ್ತು ಕೈಲಾಸಕ್ಕೆ ಹಿಂದಿರುಗಲಾಗದೆ "ಅಗ್ನಿಕೊಂಡ ಹಾಳಾಗಿ ಹೋಗಲಿ, ನಿನ್ನ ಹೆಣ್ಣು ಮಕ್ಕಳು ಮುಂಡೆಯರಾಗಲಿ, ಆಗಸ ತೂಕದ ಚಿನ್ನವಿಲ್ಲದಂತಾಗಲಿ, ಭೂಮಿ ತೂಕದ ಬೆಳ್ಳಿಯಿಲ್ಲದಂತಾಗಲಿ" ಎಂದು ತಂದೆಗೆ ಶಾಪವನ್ನು ಕೊಟ್ಟು ಅಗ್ನಿಕುಂಡಕ್ಕೆ ಬಿದ್ದು ಆತ್ಮಹತ್ಯೆ ಮಾಡಿಕೊಳ್ಳುತ್ತಾಳೆ. ಆಗ ಇದೆಲ್ಲವನ್ನೂ ಏಕದೃಷ್ಟಿಯಿಂದ ಗಮನಿಸಿದ ಈಶ್ವರನು ಉಗ್ರವಾಗಿ ತಾಂಡವ ನೃತ್ಯವನ್ನು ಮಾಡುವಾಗ ಹಣೆಯ ಮೇಲೆ ಬಂದ ಬೆವರಿನ ಹನಿಗಳನ್ನು ಸೆಳೆದು ತೆಗೆದು ನೆಲಕ್ಕೆ ಅಪ್ಪಳಿಸುತ್ತಾನೆ. ಆಗ ನೂರೊಂದು ಆಯುಧಗಳನ್ನು ಧರಿಸಿದಂತಹ ವೀರಭದ್ರನ ಜನನವಾಗುತ್ತದೆ. ಆಗ ಸಪ್ತ ಸಮುದ್ರಗಳು ಬತ್ತಿಹೋದವು. ಹುಟ್ಟಿದ ಮರುಕ್ಷಣದಲ್ಲಿಯೇ ವೀರಭದ್ರನು ಲೋಕವನ್ನೇ ಬಿಲ್ಲು ಮಾಡಿಕೊಂಡು, ಭೂಮಿಯನ್ನೇ ಬಾಣವನ್ನಾಗಿ ಮಾಡಿಕೊಂಡು, 'ತಂದೆಯೇ ನಮಗೆ ವೈರಿ ಯಾರು?' ಎಂದು ಕೇಳುತ್ತಾನೆ. ಅದಕ್ಕೆ ಶಿವನು ದಕ್ಷಬ್ರಹ್ಮನೆಂದು ಹೇಳಿ "ಅವನದು ಮುನ್ನೂರ ಅರವತ್ತು ಗಾವುದ ಪಟ್ಟಣ, ಅದಕ್ಕೆ ಮುನ್ನೂರ ಅರವತ್ತು ಬಾಗಿಲು, ಒಂದೊಂದು ಬಾಗಿಲಿಗೂ ಒಬ್ಬೊಬ್ಬ ರಾಕ್ಷಸರು ಕಾವಲಿರುತ್ತಾರೆ. ಆ ರಾಕ್ಷಸರ ಒಂದೊಂದು ತೊಟ್ಟು ರಕ್ತ ಬಿದ್ದರೆ ಒಂದು ಕೋಟಿ ರಾಕ್ಷಸರು ಜನಿಸುತ್ತಾರೆ" ಎಂದು ಹೇಳಿ ಅವನ ಹಿಂದೆಯೇ ಜನಿಸಿದ ಚೌಡೇಶ್ವರಿಯನ್ನು ಸಹಾಯಕ್ಕಾಗಿ ಕಳುಹಿಸಿ ಕೊಡುತ್ತಾನೆ.

ಕರ್ನಾಟಕ ಜನಪದ ಕಲೆಗಳು – ಭಾಗ ೨

ಸಂ: ಗೊ. ರು. ಚನ್ನಬಸಪ್ಪ

ಡೊಳ್ಳು ಕುಣಿತ:

ಜನಪದ ಕಲೆಗಳಲ್ಲಿ `ಗಂಡು ಕಲೆ' ಎನಿಸಿರುವ ಡೊಳ್ಳು ಕುಣಿತ ಪುರುಷರಿಗೆ ಮೀಸಲಾದ ಕಲೆ. ಒಳ್ಳೆಯ ಮೈ ಕಟ್ಟು ಮತ್ತು ಶಕ್ತಿ ಉಳ್ಳ ಕಲಾವಿದರು ಮಾತ್ರ ಈ ಕಲೆ ಪ್ರದರ್ಶಿಸಬಲ್ಲರು. ಉತ್ತರ ಕರ್ನಾಟಕದ ಬಹುಪಾಲು ಜಿಲ್ಲೆಗಳು ಹಾಗೂ ಚಿತ್ರದುರ್ಗ, ಶಿವಮೊಗ್ಗ ಜಿಲ್ಲೆಗಳಲ್ಲಿ ಪ್ರಚಲಿತವಿರುವ ಡೊಳ್ಳು ಕುಣಿತ ತನ್ನ ವಿಶಿಷ್ಟವಾದ ಸತ್ವ ಶೈಲಿಗಳಿಂದ ಉಳಿದುಕೊಂಡು ಬಂದಿದೆ.

ಕರ್ನಾಟಕ ಜನಪದ ಕಲೆಗಳು – ಭಾಗ ೧

ಸಂ: ಗೊ. ರು. ಚನ್ನಬಸಪ್ಪ

[ಪೀಠಿಕೆ:- ಗ್ರಾಮೀಣ ಬದುಕಿನ ಅನಕ್ಷರಸ್ತರಲ್ಲಿನ ಜಾನಪದ ಕಲೆಗಳು, ಹಾಡು, ಗಾದೆ ನಗರ ಬದುಕಿನ ಜನಕ್ಕೆ ವಿಶಿಷ್ಟ ಸಂವೇದನೆಯನ್ನುಂಟು ಮಾಡಿವೆ. ಗ್ರಾಮಗಳ ದೈನಿಕ ಬದುಕು ಆರಂಭವಾಗುವುದೇ ಇಂಥ ಜನಪದ ಹಾಡು-ಹಬ್ಬ ಆಚರಣೆಗಳಿಂದ. ಇವೊತ್ತಿನ ವಿಜ್ಞಾನಯುಗ ಪರಂಪರಾಗತ ಕಲೆಗಳನ್ನು ಮರೆಸುವಂತೆ ನಾಗಾಲೋಟಕ್ಕೆ ಓಡುತ್ತಿದೆ. ಹೀಗಿದ್ದೂ ನಗರ ಬದುಕಿನ ಈ ಜನಕ್ಕೆ `ಜನಪದ' ಮನರಂಜನೆಯನ್ನೀಯುವ ಮಟ್ಟಕ್ಕೆ ಸೀಮಿತವಾಗಿದೆಯೇನೋ ಅನ್ನುವ ಸಂಶಯ ಮೂಡಿದೆ. ಇದು ವಾಸ್ತವವೂ ಕೂಡ.

ಅನರ್ಥಕೋಶ

ಬಿಲ್ವಿದ್ಯೆ = ಸ್ನೇಹಿತರ ಜೊತೆ ಹೋಟೆಲಿಗೆ ಹೋಗಿ ಚೆನ್ನಾಗಿ ತಿಂದು ಬಿಲ್ಲನ್ನು ಸ್ನೇಹಿತರ ಕೈಲಿ ಕೊಡಿಸುವ ವಿದ್ಯೆ.