ತರಲೆ ಪ್ರಶ್ನೋತ್ತರ – ೦೨
Wednesday, December 28th, 2005ಪ್ರ: ಬ್ಯಾಂಕಿನ ಕ್ಯಾಷಿಯರ್ ನಗುವುದಿಲ್ಲವೇಕೆ?
ಉ: ಕೌಂಟರಿನ ಮೇಲೆ ಬೋರ್ಡ್ ಹಾಕಿದ್ದಾರೆ `ನಗದು’ ಎಂದು.
ಪ್ರ: ಬ್ಯಾಂಕಿನ ಕ್ಯಾಷಿಯರ್ ನಗುವುದಿಲ್ಲವೇಕೆ?
ಉ: ಕೌಂಟರಿನ ಮೇಲೆ ಬೋರ್ಡ್ ಹಾಕಿದ್ದಾರೆ `ನಗದು’ ಎಂದು.
ರಾಜಕಾರಣ ಪ್ರವೇಶ ಮಾಡುತ್ತಿದ್ದ ಮಗನಿಗೆ ಅಪ್ಪ ಹೇಳಿದ “ಮಗನೇ, ರಾಜಕಾರಣದಲ್ಲಿ ಪ್ರಾಮಾಣಿಕತೆ ಜತೆಗೆ ವಿವೇಚನೆ ಮುಖ್ಯ”
ನಾಗರ ಹಾವೆ! ಹಾವೊಳು ಹೂವೆ!
ಬಾಗಿಲ ಬಿಲದಲಿ ನಿನ್ನಯ ಠಾವೆ?
ಕೈಗಳ ಮುಗಿವೆ, ಹಾಲನ್ನೀವೆ
ಉದಯವಾಗಲಿ ನಮ್ಮ ಚೆಲುವ ಕನ್ನಡನಾಡು
ಬದುಕು ಬಲುಹಿನ ನಿಧಿಯು ಸದಭಿಮಾನದ ಗೂಡು.
ಹಚ್ಚೇವು ಕನ್ನಡದ ದೀಪ
ಕರುನಾಡದೀಪ ಸಿರಿನುಡಿಯದೀಪ
ಒಲವೆತ್ತಿ ತೋರುವಾ ದೀಪ | ಹಚ್ಚೇವು |
ಉದ್ಯೋಗವನ್ನೂ, ಒಳ್ಳೆಯ ಭವಿಷ್ಯವನ್ನೂ ಅರಸುತ್ತಾ, ತಾಯ್ನಾಡನ್ನು ಬಿಟ್ಟು, ಹೊರದೇಶಗಳಿಗೆ ಹೋಗುವ ಭಾರತೀಯರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಪ್ರತಿಭೆಗೆ ಮನ್ನಣೆ, ಕೈತುಂಬಾ ಸಂಬಳ, ಉತ್ತಮ ಮಟ್ಟದ ಜೀವನ ವಿಧಾನಗಳಿರುವ ವಿದೇಶಗಳಲ್ಲಿರುವ ಭಾರತೀಯರು ಸಂತೋಷ, ತೃಪ್ತಿಯಿಂದ ಇರುವರು ಎಂದು ಹೇಳಲಾದೀತೇ? `ನಾವು ಕನಸು ಮನಸಿನಲ್ಲಿ ಊಹಿಸಲಾಗದಷ್ಟು ವೈಭೋಗವನ್ನು ಇಲ್ಲಿ ಕಂಡಿದ್ದೇವೆ. ಹಣವಿದೆ. ಸುಖಕೊಡುವ ವಸ್ತುಗಳಿವೆ. ವಿಸ್ಮಯ ಪಡುವ ವೈಜ್ಞಾನಿಕ ಸಲಕರಣೆಗಳಿವೆ. ಆದರೇನು ಮನಸ್ಸಿಗೆ ನೆಮ್ಮದಿ ಇಲ್ಲ. ಏನೋ ಅತೃಪ್ತಿ ನಮ್ಮನ್ನೂ ಕಾಡುತ್ತದೆ’ ಎಂದು ವಿದೇಶಗಳಲ್ಲಿರುವ ಭಾರತೀಯರು ಹೇಳುತ್ತಾರೆ. ಅನೇಕ ರೀತಿಯ ಮಾನಸಿಕ ಒತ್ತಡಗಳು ಅವರನ್ನೂ ಕಾಡುತ್ತವೆ. ಉದಾಹರಣೆಗೆ-
ಭಾರತೀಯ ರೈಲುಗಳನ್ನು ಆಕರ್ಷಕಗೊಳಿಸಲು ಅವುಗಳಿಗೆ ವಿವಿಧ ಬಣ್ಣಗಳನ್ನು ಬಳಿಯಲಾಗುವುದು ಎಂದು ರೈಲು ಮಂತ್ರಿಗಳು ಹೇಳಿದ್ದಾರೆ.
ಸ್ವಾತಂತ್ರೊ ತ್ಸವದ ೫೦ನೆಯ ವರ್ಧಂತಿ.
೫೦ ವರ್ಷಗಳ ಅನಂತರವೂ ಪರಿಸ್ಥಿತಿಯಲ್ಲಿ ಹೆಚ್ಚು ವ್ಯತ್ಯಾಸವಿಲ್ಲ. ಅಂದೂ ನಮ್ಮ ನಾಯಕರು ಕಾರಾಗೃಹದಲ್ಲಿದ್ದರು. ಇಂದೂ ನಮ್ಮ ಕೆಲವು ನಾಯಕರು ಕಾರಾಗೃಹದಲ್ಲಿದ್ದಾರೆ.
ಕನ್ನಡಪ್ರಭ ಪತ್ರಿಕೆಯಲ್ಲಿ ಖ್ಯಾತ ವಿಜ್ಞಾನ ಲೇಖಕರು ಹಾಗೂ ಅತ್ಮೀಯರೂ ಆದ ಹಾಲ್ದೊಡ್ಡೇರಿ ಸುಧೀಂದ್ರ ಅವರ ಅಂಕಣ ಪ್ರತಿ ಭಾನುವಾರ ಇದೆ. ಇಂದಿನ ಅಂಕಣದಲ್ಲಿ ಆವರು ಬರೆಯುತ್ತಾರೆ -”ಭಾರತದ ಎಲ್ಲ ಪ್ರತಿಭಾನ್ವಿತರಂತೆ ಉನ್ನತ ವ್ಯಾಸಂಗಕ್ಕೆಂದು ಅಮೆರಿಕಾಕ್ಕೆ ತೆರಳಿ ಅಲ್ಲಿಯೇ ಉಳಿದು ಮತ್ತಷ್ಟು ಕೀರ್ತಿ ಸಂಪಾದಿಸಿದವ”. ಇಲ್ಲಿ ಅವರು ಹೇಳುತ್ತಿರುವುದು ಅಮೇರಿಕಾದಲ್ಲಿರುವ ಒಬ್ಬ ಭಾರತೀಯ ಸಂಜಾತ ವಿಜ್ಞಾನಿಯ ಬಗ್ಗೆ. ಸುಧೀಂದ್ರರ ಪ್ರಕಾರ ಅಮೇರಿಕಾಕ್ಕೆ ತೆರಳದೆ ಇಲ್ಲೇ ಉಳಿದಿರುವ ನಾವು ಯಾರೂ ಪ್ರತಿಭಾನ್ವಿತರಲ್ಲ.
ಪ್ರಜಾವಾಣಿ ಪತ್ರಿಕೆಯಲ್ಲಿ ಕೆ. ಆರ್ ಚಂದ್ರಶೇಖರ ಎಂಬವರು ಎಲ್ಲ ಭಾಷೆಗಳಿಂದ ಕನ್ನಡಕ್ಕೆ ಅನುವಾದ ಮಾಡುವ ತಂತ್ರಾಂಶವೊಂದನ್ನು ತಯಾರಿಸಬೇಕು ಎಂಬ ಪ್ರಸ್ತಾಪವನ್ನು ಮುಂದಿಟ್ಟರು. ಅದಕ್ಕೆ ಪ್ರತಿಕ್ರಿಯೆಯಾಗಿ ಚ. ಹ. ರಘುನಾಥ ಅವರು ಸದ್ಯಕ್ಕೆ ಅನುವಾದದ ತಂತ್ರಾಂಶ ತುಂಬ ದೂರದ ಕನಸು. ಅತೀ ಅಗತ್ಯವಾಗಿ ಆಗಬೇಕಾದ ಇತರೆ ಕೆಲಸಗಳೇ ಬಾಕಿ ಇವೆ ಎಂದು ಬರೆದರು. ಈ ವಿಷಯವನ್ನು ನಾನೂ ಒಪ್ಪುತ್ತೇನೆ. ರಘುನಾಥ ಅವರು ತಮ್ಮ ಮಾತಿಗೆ ಉದಾಹರಣೆಯಾಗಿ ಕನ್ನಡದಲ್ಲಿ ಇನ್ನೂ ಹಲವಾರು ರೀತಿಯ ಕೀಲಿಮಣೆಗಳು ಚಾಲ್ತಿಯಲ್ಲಿರುವುದನ್ನು ಪ್ರಸ್ತಾಪಿಸಿದರು. ಹಾಗೆಯೇ ಹಲವರು ಇಂಗ್ಲಿಶ್ ಲಿಪಿಯಲ್ಲಿ ಕನ್ನಡವನ್ನು ಬರೆದು (ಟೈಪಿಸಿ) ಇಮೈಲ್ ಮಾಡುವುದನ್ನು ಪ್ರಸ್ತಾಪಿಸಿದರು. ಅವರ ಪ್ರಕಾರ ಕನ್ನಡದಲ್ಲಿ ಬೆರಳಚ್ಚು ಮಾಡುವುದನ್ನು ಕಲಿಯುವುದು ಒಂದು ಹೆಚ್ಚಿನ ಕೆಲಸ. ನಾನು ಕೇಳುತ್ತೇನೆ -”ನೀವು ಹುಟ್ಟುವಾಗ ಇಂಗ್ಲಿಶ್ ಕೀಲಿಮಣೆಯನ್ನು ಕಲಿತುಕೊಂಡೇ ಹುಟ್ಟಿ ಬಂದಿರೇ? ಇಂಗ್ಲಿಶ್ ಕೀಲಿಮಣೆ ಕಲಿಯುವುದು ನಿಮಗೆ ಕಷ್ಟವಾಗಲಿಲ್ಲ. ಅದು ಒಂದು ಹೆಚ್ಚಿನ ಕೆಲಸವಾಗಲಿಲ್ಲ. ಕನ್ನಡದ ಕೀಲಿಮಣೆ ಕಲಿಯುವುದು ಮಾತ್ರ ಯಾಕೆ ಹೆಚ್ಚಿನ ತೊಂದರೆಯ ಕೆಲಸ ಎಂದೆನಿಸುತ್ತದೆ?”. ರಘುನಾಥ ಅವರ ಮಾತುಗಳಿಗೆ ನನ್ನ ವಿಶೇಷವಾದ ಅಡ್ಡಿಯೇನಿಲ್ಲ.