Press "Enter" to skip to content

Posts published in February 2006

ಸಾಪ್ತಾಹಿಕ ಪುರವಣಿಗಳು ಮತ್ತು ಸಾಹಿತ್ಯದ ಕೆಲಸ

- ಬೇಳೂರು ಸುದರ್ಶನ

ಸಾಪ್ತಾಹಿಕ ಪುರವಣಿಗಳು ಅಂದಕೂಡ್ಲೇ ನಮಗೆ ಸಾಮಾನ್ಯವಾಗಿ ನೆನಪಾಗೋದು ಒಂದು ಒಳ್ಳೆ ಮುಖಪುಟ ಲೇಖನ, ಒಂದು ದೊಡ್ಡ ಕಥೆ ಜೊತೆಗೆ ಒಂದು ಕವನ. ಇದೊಂಥರ ಸಿದ್ಧ ಮಾದರಿ ಅನ್ನೋ ಭಾವನೆ ಬರೋದಕ್ಕೇ ಸಾಧ್ಯವಿಲ್ಲದ ಹಾಗೆ ಈ ಸಾಪ್ತಾಹಿಕ ಪುರವಣಿಗಳನ್ನು ನಾವು ನೋಡ್ತಾ ಇದ್ದೇವೆ.

'ಮಾಯಾಲೋಕ'ದ ಮೊದಲನೋಟ

- ಬೇಳೂರು ಸುದರ್ಶನ

ಹಿರಿಯ ತಲೆಮಾರಿನ ಲೇಖಕರೆಲ್ಲ ಇನ್ನೂ A4 ಹಾಳೆಗಳ ನಡುವೆಯೇ ಬರವಣಿಗೆಯನ್ನು ನಡೆಸುತ್ತಾ ಇರೋ ಕಾಲದಲ್ಲಿ ಕಂಪ್ಯೂಟರ್ ಗ್ರಾಫಿಕ್ಸ್‌ಗೂ ಕೈ ಹಾಕಿದ ಸಾಹಿತಿ ನಮ್ಮ ಪ್ರೀತಿಯ ಪೂರ್ಣಚಂದ್ರ ತೇಜಸ್ವಿಯವರು. ಎಲ್ಲರೂ ಕಥೆ ಕಾದಂಬರಿ ಬರೀತಾ ಇದ್ದರೆ ಅವರು ಅದೆಲ್ಲವನ್ನೂ ಬರೆದು ಮಾಹಿತಿ ಸಾಹಿತ್ಯಕ್ಕೂ ಬಂದರು; ಕಿರಗೂರಿನ ಗಯ್ಯಾಳಿಗಳೂ ಬೆದರುವಂಥ ಮಿಲೆನಿಯಮ್ ಬಿರುಗಾಳಿ ಬೀಸಿದರು. ಕಂಪ್ಯೂಟರಿನಲ್ಲಿ ಕನ್ನಡವು ಅರಳಬೇಕೆಂದು ಬೆಂಗಳೂರಿಗೆ ಬಂದು ಪ್ರೆಸ್‌ಮೀಟ್ ಮಾಡಿದರು. ಪಂಪ ಪ್ರಶಸ್ತಿ ಬಂದರೂ ಬನವಾಸಿಯನ್ನು ನೆನೆಯಲಿಲ್ಲ. ಅಪ್ಪನಿಗಿಂತ ಶಿವರಾಮ ಕಾರಂತರೇ ನನ್ನ ಎದುರಿನ ಮಾದರಿ ಎಂದಿದ್ದೂ ಇದೆ.

ಬಿಲ್ ಗೇಟ್ಸ್‌ಗೂ ಉಪ್ಪಿಟ್ಟೇ?

ನಾನು ಮೊದಲೇ ಎಚ್ಚರಿಸುತ್ತೇನೆ. ನೀವು ಉಪ್ಪಿಟ್ಟು ಪ್ರಿಯರಾದರೆ ಈ ಬ್ಲಾಗನ್ನು ಓದಬೇಡಿ. ಓದಿದ ನಂತರ ಮೆಣಸು ಜಾಸ್ತಿ ಹಾಕಿದ ಉಪ್ಪಿಟ್ಟನ್ನು ತಿಂದವರಂತೆ ಮುಖ ಸಿಂಡರಿಸಿಕೊಂಡರೆ ನಾನು ಹೊಣೆಯಲ್ಲ.