Press "Enter" to skip to content

Posts published in “Year: 2006

ಪದವೀಧರರಿಗೆ ಮತ ಚಲಾಯಿಸಲು ಗೊತ್ತಿಲ್ಲವೇ?

ಇತ್ತೀಚೆಗೆ ಕರ್ನಾಟಕದ ವಿಧಾನ ಪರಿಷತ್ತಿನ ಪದವೀಧರ ಕ್ಷೇತ್ರಗಳ ಪ್ರತಿನಿಧಿಗಳನ್ನು ಆಯ್ಕೆ ಮಾಡಲು ಚುನಾವಣೆಗಳು ಜರುಗಿದವು. ಅದರ ಫಲಿತಾಂಶಗಳನ್ನು ನೋಡಿದಾಗ ಒಂದು ಅಂಶ ನನಗೆ ತುಂಬ ಆಶ್ಚರ್ಯ ಮತ್ತು ದುಃಖವನ್ನುಂಟು ಮಾಡಿದವು. ಅದೆಂದರೆ ಈ ಚುನಾವಣೆಯಲ್ಲಿ ಹಾಕಿದ ಮತಗಳಲ್ಲಿ ಸುಮಾರು ಶೇಕಡ ೧೦ರಷ್ಟು ಮತಗಳು ಅಸಿಂಧು ಎಂದು ಪರಿಗಣಿಸಲ್ಪಟ್ಟಿದ್ದು. ಈ ಚುನಾವಣೆಗಳಲ್ಲಿ ಮತ ಚಲಾಯಿಸುವವರು ಜನಸಾಮಾನ್ಯರಲ್ಲ. ಅನಕ್ಷರಸ್ಥರಂತೂ ಅಲ್ಲವೇ ಅಲ್ಲ. ಅವರೆಲ್ಲರೂ ವಿಶ್ವವಿದ್ಯಾಲಯದಿಂದ ಪದವಿ ಪಡೆದವರು. ಹೀಗದ್ದೂ ಮತ ಚಲಾಯಿಸುವುದು ಹೇಗೆ ಎಂದು ಅವರಿಗೆ ತಿಳಿದಿಲ್ಲ ಎಂದರೆ ಅಶ್ಚರ್ಯ ಆಗಬೇಡವೇ? ಇವರಲ್ಲಿ ಅರ್ಧಕ್ಕಿಂತ ಹೆಚ್ಚು ಮಂದಿ ಶಿಕ್ಷಕರಾಗಿದ್ದಾರೆ. ಇವರಿಂದ ಶಿಕ್ಷಣ ಪಡೆದರೆ ಆ ವಿದ್ಯಾರ್ಥಿಗಳ ಮಟ್ಟ ಹೇಗಿರಬೇಕು? ನಮ್ಮ ಶಾಲಾ ಕಾಲೇಜುಗಳಲ್ಲಿ ಶಿಕ್ಷಣದ ಮಟ್ಟ ತುಂಬ ಕುಸಿದಿದೆ ಎಂದರೆ ಅದಕ್ಕೆ ಪ್ರತ್ಯೇಕ ಕಾರಣ ಹುಡುಕಬೇಕಾಗಿಲ್ಲ ಅಲ್ಲವೇ?

ವಿಶುವಲ್ ಸ್ಟುಡಿಯೋದಲ್ಲಿ ಕನ್ನಡದ ಅಕಾರಾದಿ ವಿಂಗಡಣೆ

ಗಣಕದಲ್ಲಿ ಕನ್ನಡ ಎಂದರೆ ಗಣಕದಲ್ಲಿ ಕನ್ನಡವನ್ನು ಬೆರಳಚ್ಚು ಮಾಡುವುದು ಎಂದೇ ಬಹುಪಾಲು ಮಂದಿ ಇನ್ನೂ ತಿಳಿದುಕೊಂಡಿದ್ದಾರೆ. ಗಣಕದಲ್ಲಿ ಕನ್ನಡದ ಆನ್ವಯಿಕ ತಂತ್ರಾಂಶಗಳನ್ನು (application software) ಸುಲಭವಾಗಿ ತಯಾರಿಸಬಹುದು. ಇಂಗ್ಲೀಶ್ ಭಾಷೆಯಲ್ಲಿ ಏನೇನು ಸಾಧ್ಯವೋ ಅವೆಲ್ಲವೂ ಕನ್ನಡದಲ್ಲೂ ಸಾಧ್ಯ. ಮುಖ್ಯವಾಗಿ ದತ್ತ ಸಂಸ್ಕರಣೆ (data processing). ಕನ್ನಡದಲ್ಲಿ ಆನ್ವಯಿಕ ತಂತ್ರಾಂಶ ತಯಾರಿಸಲು ಮುಖ್ಯ ಆವಶ್ಯಕತೆಯೆಂದರೆ ಕನ್ನಡದ ಅಕಾರಾದಿ ವಿಂಗಡಣೆ. ಮೈಕ್ರೋಸಾಫ್ಟ್‌ನವರ ಆಕ್ಸೆಸ್ ಮತ್ತು ಎಸ್‌ಕ್ಯೂಎಲ್ ಸರ್ವರ್‌ಗಳು ಕನ್ನಡದ ಅಕಾರಾದಿ ವಿಂಗಡಣೆಯನ್ನು ಸರಿಯಾಗಿ ನಿರ್ವಹಿಸುತ್ತವೆ. ಅವು ಮಾತ್ರವಲ್ಲ. ವಿಶುವಲ್ ಸ್ಟುಡಿಯೋ ಕೂಡ ಕನ್ನಡದ ಅಕಾರಾದಿ ವಿಂಗಡಣೆಯನ್ನು ಸರಿಯಾಗಿ ನಿರ್ವಹಿಸುತ್ತವೆ. ಒಂದು ಉದಾಹರಣೆಯನ್ನು ಕೆಳಗೆ ಕೊಟ್ಟಿದ್ದೇನೆ.

ರೇಡಿಯೋ ಸಿಟಿಯಲ್ಲಿ ಕನ್ನಡದ ಚೌಚೌ ಬಾತ್

ಬೆಂಗಳೂರಿನ ರೇಡಿಯೋ ಸಿಟಿ (91FM) ಯಲ್ಲಿ ಕನ್ನಡ ಕಾರ್ಯಕ್ರಮಗಳಿಲ್ಲ ಎಂದು ಹಲವಾರು ಕನ್ನಡ ಪ್ರೇಮಿಗಳು ಆಗಾಗ ದೂರು ನೀಡುತ್ತಿದ್ದಾರೆ. ಇತ್ತೀಚೆಗೆ ನಾನು ಒಮ್ಮೆ ಯಾಕೋ ರೇಡಿಯೋ ಸಿಟಿ ಹಾಕಿದಾಗ ಆಶ್ಚರ್ಯವಾಯಿತು. ಕನ್ನಡ ಹಾಡು ಕೇಳಿ ಬರುತ್ತಿತ್ತು. ನಂತರ ಒಂದೆರಡು ದಿನ ಗಮನಿಸಿದಾಗ ಕಂಡು ಬಂದುದೇನೆಂದರೆ ರೇಡಿಯೋ ಸಿಟಿಯಲ್ಲಿ ಕನ್ನಡ ಕಾರ್ಯಕ್ರಮಗಳು ಬರುತ್ತಿವೆ ಎಂದು. ಬೆಳಿಗ್ಗೆ ಏಳು ಘಂಟೆಯ ಮೊದಲು ಭಕ್ತಿ ಗೀತೆ, ಮಧ್ಯಾಹ್ನ ಒಂದರಿಂದ ಮೂರು ಘಂಟೆ ವರೆಗೆ "ಮಲ್ಲಿಗೆ ಸರ್ಕಲ್", ಶನಿವಾರ ಬೆಳಿಗ್ಗೆ "ಬೆಂಗಳೂರು ಟಾಕೀಸ್", ಮತ್ತು ಭಾನುವಾರ ಬೆಳಿಗ್ಗೆ ಏಳರಿಂದ ಹತ್ತರ ವರೆಗೆ "ಚೌ ಚೌ ಬಾತ್" - ಇಷ್ಟು ನಾನು ಗಮನಿಸಿರುವ ಕನ್ನಡ ಕಾರ್ಯಕ್ರಮಗಳು. ಮೊನ್ನೆ ಭಾನುವಾರ (ಜೂನ್ ೧೧ರಂದು) ಚೌಚೌ ಬಾತ್ ಕಾರ್ಯಕ್ರಮದಲ್ಲಿ ನಾನು ಅತಿಥಿಯಾಗಿ ಭಾಗವಹಿಸಿದ್ದೆ. ನಂದಕುಮಾರ್ ಉತ್ತಮವಾಗಿ ಕಾರ್ಯಕ್ರಮ ನಡೆಸಿಕೊಟ್ಟರು -ಇದು ನಾನು ಹೇಳುತ್ತಿರುವುದಲ್ಲ, ಕಾರ್ಯಕ್ರಮ ಕೇಳಿದ ಹಲವು ಜನ ಹೇಳಿದ್ದು ಮತ್ತು ಫೋನು ಹಾಗೂ ಇ-ಮೈಲ್ ಮೂಲಕ ತಿಳಿಸಿದ್ದು.

Google spreadsheet

Recently Google released [http://spreadsheets.google.com|Google Spreadsheets]. It is the online version of spreadsheets. The advantage is that one can keep his spreadsheet on the web and access it from anywhere. I took a first look at it. It was not very impressive. One simple feature -exiting without saving the modifications -is missing. If you make a mistake, then you had it. There are some good features though, like able to import and export Microsoft Excel spreadsheets. A group of people can acess the spreadsheet, etc. As usual with Google, this is also called beta. Sometimes I wonder why don't they call Google itself as Google Beta as they do with Gmail.

ನಾನು ಬ್ಲಾಗಿಸುವುದು ನನಗೆಂದು

ಸುಧಾ ಪತ್ರಿಕೆಯಲ್ಲಿ ಬ್ಲಾಗ್‌ ಬಗ್ಗೆ ರಘುನಾಥ ಚ ಹ ಅವರ ಲೇಖನ ಪ್ರಕಟವಾಗಿತ್ತು. ಆ ಲೇಖನದ ಜೊತೆ ನನ್ನದೊಂದು ಕಿರು ಸಂದರ್ಶನ -ಬ್ಲಾಗಿಂಗ್ ಬಗ್ಗೆ - ಪ್ರಕಟವಾಗಿತ್ತು. ಅದನ್ನು ಇಲ್ಲಿ ನೀಡುತ್ತಿದ್ದೇನೆ.

ಕನ್ನಡ ತ೦ತ್ರಾಶ ತ೦ತ್ರಜ್ಞಾನ ಯಾವ ಹ೦ತದಲ್ಲಿದೆ?

ಕನ್ನಡಿಗರಾಗಿ, ನಾವು ಕನ್ನಡ ತ೦ತ್ರಜ್ಞಾನಕ್ಕಾಗಿ ಏನೇನಾಗಬೇಕಿದೆ ಎಂಬುದನ್ನು ಒ೦ದು ಲೇಖನದ ಮೂಲಕ ಜನರಲ್ಲಿ ತಿಳಿವಳಿಕೆ ಮೂಡಿಸಬೇಕು. ಬಲ್ಲವರಲ್ಲಿ ನಾನು, ಈ ಬಗ್ಗೆ ಒ೦ದು ಲೇಖನ ಬರೆಯಿರೆ೦ದು ವಿನ೦ತಿಸಿಕೊಳುತ್ತೇನೆ.

It is TechEd time again

It is the TechEd time again. Tech Ed is Microsoft's biggest developer event. Three days full of sessions targetted for different streams like Developer Tools, WinFX, Mobile and Embedded, Data, Security, etc.

sabimana

regaring language,land,river,religion your felling is most important speckout better later than never..........

ಕನ್ನಡದಲ್ಲೇ ಪ್ರೋಗ್ರಾಮ್ಮಿಂಗ್ ಮಾಡಿ!

ನಾನು ಹಲವು ವರ್ಷಗಳ ಹಿಂದೆಯೇ ಲೋಗೋ ಎಂಬ ಗಣಕ ಕ್ರಮವಿಧಿ ರಚನೆಯ ತಂತ್ರಾಶವನ್ನು ಕನ್ನಡೀಕರಿಸಿದ್ದೆ. ಲೋಗೋ ಎಂಬುದು ತುಂಬ ಜತ್ಪ್ರಸಿದ್ಧವಾದ ತಂತ್ರಾಂಶ. 8ರಿಂದ 14 ವರ್ಷ ಪ್ರಾಯದ ಮಕ್ಕಳು ಪ್ರೋಗ್ರಾಮ್ಮಿಂಗ್ ಕಲಿಯಲು ಇದನ್ನು ಬಳಸುತ್ತಾರೆ. ಇದರ ಪ್ರಾತ್ಯಕ್ಷಿಕೆಯನ್ನು ನೋಡಿದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಂದಿನ ಅಧ್ಯಕ್ಷರಾದ ಬರಗೂರು ರಾಮಚಂದ್ರಪ್ಪನವರು ಈ ತಂತ್ರಾಂಶವನ್ನು ಕರ್ನಾಟಕ ಸರಕಾರದ ಕನ್ನಡೆ ಕಂಪ್ಯೂಟರ್ ಕ್ರಿಯಾ ಯೋಜನೆಯಲ್ಲಿ ಸೇರಿಸಿಕೊಂಡಿದ್ದರು. ಕನ್ನಡ ಗಣಕ ಲೋಕದಲ್ಲಿ ಹಲವು ಬಿರುಗಾಳಿಗಳು ಬೀಸಿ, ಏನೇನೆಲ್ಲಾ ಆಗಿ ಹೋದವು. ಈ ತಂತ್ರಾಶವನ್ನು ಇದುತನಕ ಸರಕಾರ ಸ್ವೀಕರಿಸಿ ಶಾಲೆಗಳಿಗೆ ನೀಡಲಿಲ್ಲ. ಈಗ ನಾನು ಅದನ್ನು ಅಂತರಜಾಲದ ಮೂಲಕ ನೀಡಲು ತೀರ್ಮಾನಿಸಿದ್ದೇನೆ. ದಯವಿಟ್ಟು ಅದನ್ನು ಡೌನ್‌ಲೋಡ್ ಮಾಡಿ, ಬಳಸಿ, ನನಗೆ ನಿಮ್ಮ ಸಲಹೆ ನೀಡಿರಿ. ಹಾಗೆಯೇ ದೇಣಿಗೆಯನ್ನೂ ನೀಡಬಹುದು :-). ಹೆಚ್ಚಿನ ಮಾಹಿತಿಗಳು ಇಲ್ಲಿ ಲಭ್ಯವಿವೆ.

ಆರ್‍. ಜಿ. ಹಳ್ಳಿ ನಾಗರಾಜ್ ಅವರಿಗೆ ಗೌತಮ ಪ್ರಶಸ್ತಿ

ಬೆಂಗಳೂರು, ಮೇ ೧೩, ೨೦೦೬: ಬೆಂಗಳೂರಿನ ರಾಜಾಜಿನಗರದ ರಂಗೋತ್ರಿ ಮಕ್ಕಳ ರಂಗಶಾಲೆಯವರು ವಿಶ್ವ ಕನ್ನಡದ ಸಹಾಯಕ ಸಂಪಾದಕರಾದ ಆರ್‍. ಜಿ. ಹಳ್ಳಿ ನಾಗರಾಜ್ ಅವರಿಗೆ ೨೦೦೬ನೆ ಇಸವಿಯ ಗೌತಮ ಪ್ರಶಸ್ತಿ ನೀಡಿ ಗೌರವಿಸಿದರು. ಬೆಂಗಳೂರಿನಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಬೇಲಿಮಠದ ಶಿವಾನುಭವ ಚರಮೂರ್ತಿ ಶಿವರುದ್ರ ಮಹಾಸ್ವಾಮಿಗಳು ಈ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಿದರು. ಕಾರ್ಯಕ್ರಮದಲ್ಲಿ ಕರ್ನಾಟಕ ಸರಕಾರದ ಸಾರಿಗೆ ಸಚಿವರಾದ ಶ್ರೀ ಚೆಲುವರಾಯ ಸ್ವಾಮಿಯವರು ಉಪಸ್ಥಿತರಿದ್ದರು. ರಂಗೋತ್ರಿ ಮಕ್ಕಳ ರಂಗಶಾಲೆಯವರು ಬುದ್ಧ ಪೂರ್ಣಿಮೆಯ ಅಂಗವಾಗಿ ಸಮಾಜದ ಗಣ್ಯರಿಗೆ ಗೌತಮ ಪ್ರಶಸ್ತಿ ಪ್ರದಾನ ಮತ್ತು ಬೆಳದಿಂಗಳ ಕಾವ್ಯ ಸಂಗೀತೋತ್ಸವ ಆಯೋಜಿಸಿದ್ದರು. ೨೦೦೬ನೆ ಸಾಲಿನ ಗೌತಮ ಪ್ರಶಸ್ತಿಗೆ ಪಾತ್ರರಾದವರು - ಡಾ| ಸುಭಾಷ್ ಭರಣಿ, ನಾಗತಿಹಳ್ಳಿ ಚಂದ್ರಶೇಖರ್‍, ಆರ್‍. ಜಿ. ಹಳ್ಳಿ ನಾಗರಾಜ್, ಎಂ. ಎಸ್. ಮೂರ್ತಿ, ಡಾ| ಎಚ್. ಎಂ. ವೆಂಕಟಪ್ಪ, ಬಿ. ಟಿ. ರಾಮಚಂದ್ರ, ಸೂತ್ರಂ ನಾಗರಾಜ ಶಾಸ್ತ್ರಿ, ಶರಣಪ್ಪ ಗೋನಾಳ, ಶಿವಶಂಕರ್‍, ಎಂ. ಆರ್‍. ಮಾಳಿ, ಡಾ| ಕೃಷ್ಣರಾಜ ಭಟ್, ಮಂಜುನಾಥ ಆಚಾರ್ಯ, ಜಿ. ರಾಮಕೃಷ್ಣ ಮತ್ತು ಶ್ರೀದೇವಿ ಮೇಳಗಟ್ಟಿ.