ಬೆಂಗಳೂರು, ಜನವರಿ ೨೭, ೨೦೦೮: ಬೆಂಗಳೂರಿನ ದಕ್ಷಿಣಕ್ಕೆ ಕನಕಪುರ ರಸ್ತೆಗೆ ಹೊಂದಿಕೊಂಡಿರುವ ಕಗ್ಗಲಿಪುರದಲ್ಲಿರುವ ಅಮೃತಧಾರಾ ಗೋಶಾಲೆಯ ಆವರಣದಲ್ಲಿ ಫೆಬ್ರವರಿ ೧೭ರಂದು ಸಮರ್ಪಣ - ೨೦೦೮ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಪ್ರಧಾನವಾಗಿ ರೈತರ ಸಮಾವೇಶ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿರುತ್ತವೆ. ಪೂರ್ವಾಹ್ನ ೧೧ ಘಂಟೆಗೆ ರೈತರ ಸಮಾವೇಶವಿರುತ್ತದೆ. ಕನಕಪುರ ತಾಲೂಕಿನ ರೈತರ ಸಮಾವೇಶದಲ್ಲಿ “ಗೋಸಂರಕ್ಷಣೆಯ ಅಗತ್ಯ”, “ಗೋವು ಮತ್ತು ಆರ್ಥಿಕತೆ” ಈ ವಿಷಯಗಳ ಬಗ್ಗೆ ಉಪನ್ಯಾಸ ಮತ್ತು ಚರ್ಚೆಗಳಿರುತ್ತವೆ. ಅಪರಾಹ್ನದ ಕಾರ್ಯಕ್ರಮಗಳಲ್ಲಿ ಗೋವಿಗಾಗಿ ಸದ್ದಿಲ್ಲದೆ ದುಡಿಯುತ್ತಿರುವ ಎಲೆಮರೆಯ ಕಾಯಿಗಳಿಗೆ ಸೇವಾಪುರಸ್ಕಾರ ನೀಡಲಾಗುತ್ತದೆ. ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಯವರ ಅಶೀರ್ವಚನದ ನಂತರ ಸಾಂಸ್ಕೃತಿಕ ಕಾರ್ಯಕ್ರಮವಿರುತ್ತವೆ. ಕದ್ರಿ ಗೋಪಾಲನಾಥರ ಶಿಷ್ಯ ಶ್ರೀಧರ ಸಾಗರ ಅವರಿಂದ ಸ್ಯಾಕ್ಸಾಫೋನ್ ವಾದನ, ರವಿಚಂದ್ರ ಮತ್ತು ತಂಡದವರಿಂದ ಕೊಳಲು ಪ್ರಧಾನವಾಗಿರುವ ವಾದ್ಯವೃಂದ ರೂಪಕ ಹಾಗೂ ಹೊಸನಗರದ ಶ್ರೀರಾಮಚಂದ್ರಾಪುರ ಮಠದ ತಂಡದವರಿಂದ ನೃತ್ಯ ರೂಪಕವಿರುತ್ತದೆ. ಕೊನೆಯಲ್ಲಿ ಗೋವುಗಳಿಗೆ ನೀರಾಜನ ಮತ್ತು ದೀಪೋತ್ಸವ ಕಾರ್ಯಕ್ರಮಗಳಿರುತ್ತವೆ. ಸಮಸ್ತರು ಈ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಕೋರಲಾಗಿದೆ. ಇಡೀ ದಿನ ಗವ್ಯ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಹಾಗೂ ಗವ್ಯ ಚಿಕಿತ್ಸೆಯ ವ್ಯವಸ್ಥೆ ಇರುತ್ತದೆ.
Posts published in January 2008
Q: Is it possible to transliterate from Kannada into Hindi? I have the data in Microsoft Word 2003 doc file.
A: Surprisingly the answer is YES. Many people are not aware of this little feature built into Microsoft Word 2003. The steps are like this -
- ಡಾ. ಯು. ಬಿ. ಪವನಜ
ಮೋನಪ್ಪ ಬಂಗೇರ ಕರಾವಳಿಯಲ್ಲಿರುವಾತ. ಮೀನು ಹಿಡಿದು ಮಾರಿ ಜೀವನ ನಡೆಸುವವ. ಹಲವು ವರ್ಷಗಳ ಹಿಂದಿನ ಕತೆ. ಮೋನಪ್ಪನಿಗೆ ಕೆಲವೊಮ್ಮೆ ತುಂಬ ಮೀನುಗಳು ಸಿಗುವವು. ತುಂಬ ಸಂತಸದಿಂದ ಆತ ಮೀನುಗಳನ್ನು ಮಾರುಕಟ್ಟೆಗೆ ಒಯ್ದರೆ ಆ ದಿನ ಎಲ್ಲ ಬೆಸ್ತರೂ ತುಂಬ ಮೀನು ತಂದಿರುವುದರಿಂದ ಮೀನುಗಳಿಗೆ ಬೇಡಿಕೆ ಇಲ್ಲ. ಹಿಡಿದ ಮೀನುಗಳನ್ನು ದಾಸ್ತಾನು ಮಾಡಲು ಆತನಲ್ಲಿ ಶ್ಶೆತ್ಯಾಗಾರವಿಲ್ಲ. ಕೊನೆಗೆ ಸಿಕ್ಕಿದ ಬೆಲೆಗೆ ಮೀನುಗಳನ್ನು ಮಾರಬೇಕಾದ ಪರಿಸ್ಥಿತಿ. ಆತನಿರುವ ಊರಿನಿಂದ ಸುಮಾರು ಹತ್ತು ಕಿಲೋಮೀಟರು ದೂರದ ಇನ್ನೊಂದು ಊರಿನಲ್ಲಿ ಮೀನಿಗೆ ಬೇಡಿಕೆ ಇತ್ತು. ಆದರೆ ಅದು ಮೋನಪ್ಪನಿಗೆ ತಿಳಿದಿರಲಿಲ್ಲ. ಆದರೆ ಈಗ ಪರಿಸ್ಥಿತಿ ಬದಲಾಯಿಸಿದೆ. ಮೋನಪ್ಪನ ಕೈಗೆ ಮೊಬೈಲ್ ಫೋನು ಬಂದಿದೆ. ಸಮುದ್ರದಲ್ಲಿ ಇರುವಾಗಲೆ ಆತ ಹತ್ತಿರದ ಎರಡು ಮೂರು ಊರುಗಳಿಗೆ ಫೋನಾಯಿಸುತ್ತಾನೆ. ಯಾವ ಮಾರುಕಟ್ಟೆಯಲ್ಲಿ ಮೀನಿಗೆ ಬೇಡಿಕೆ ಇದೆ ಎಂದು ತಿಳಿದುಕೊಳ್ಳುತ್ತಾನೆ. ಎಷ್ಟು ಮೀನಿಗೆ ಬೇಡಿಕೆ ಇದೆ ಎಂಬುದನ್ನೂ ತಿಳಿದುಕೊಳ್ಳುತ್ತಾನೆ. ಮೊಬೈಲ್ ಫೋನಿನಿಂದ ಆತನಿಗೆ ತುಂಬ ಪ್ರಯೋಜನವಾಗಿದೆ. ಎಷ್ಟು ಬೇಕೋ ಅಷ್ಟೇ ಮೀನು ಹಿಡಿದು ಎಲ್ಲಿಗೆ ಬೇಕೋ ಅಲ್ಲಿಗೆ ತೆಗೆದುಕೊಂಡು ಹೋಗಿ ಮಾರುತ್ತಾನೆ. ಹೆಚ್ಚಿಗೆಯಾದ ಮೀನುಗಳನ್ನು ಎಸೆಯುವ ಅಥವಾ ಅತಿ ಕಡಿಮೆ ಬೆಲೆಗೆ ಮಾರುವ ಅಗತ್ಯವಿಲ್ಲ. ಸಮಯವೂ ಉಳಿತಾಯವಾಗುತ್ತದೆ.
Q: I downloaded and installed the Kannada IME from Bhasha India web-site. Still I don't get Kannada properly in Windows XP. I see blank squares when I type using the Kannada IME. Why?
A: The Bhasha India IME will add additional keyboard layouts also known as Input Method Editor (IME) only.
