Press "Enter" to skip to content

Posts published in “ಮಕ್ಕಳಿಗಾಗಿ”

ಮಕ್ಕಳಿಗೆ ಮತ್ತು ಮಕ್ಕಳ ಮನಸ್ಸಿನ ದೊಡ್ಡವರಿಗೆ

ಹಾವಿನ ಹಾಡು

- ಪಂಜೆ ಮಂಗೇಶ ರಾವ್

ನಾಗರ ಹಾವೆ! ಹಾವೊಳು ಹೂವೆ!
ಬಾಗಿಲ ಬಿಲದಲಿ ನಿನ್ನಯ ಠಾವೆ?
ಕೈಗಳ ಮುಗಿವೆ, ಹಾಲನ್ನೀವೆ

ನಮ್ಮ ಗೆಳೆಯ ಚಂದಮಾಮ

- ಸುರಭಿ ಬೆಳ್ಳಿಪ್ಪಾಡಿ

ಚಂದಮಾಮ ಚಂದಮಾಮ
ಹುಣ್ಣಿಮೆ ದಿನದ ಚಂದಮಾಮ

ನೋಡಲು ಬಲು ಸುಂದರ

ನಿಮ್ಮಿ

- ಡಾ. ಯು. ಬಿ. ಪವನಜ

ಆಕೆಯ ಹೆಸರು ನಿರ್ಮಲ. ಆದರೆ ಎಲ್ಲರೂ ಕರೆಯುವುದು ನಿಮ್ಮಿ ಎಂದು. ಮನೆ ಎಂದು ಹೇಳುಕೊಳ್ಳುವಂತಹ ಮನೆಯೇನೂ ಆಕೆಗೆ ಇಲ್ಲ. ಕೊಳೆಗೇರಿಯಲ್ಲೊಂದು ಚಿಕ್ಕ ಗುಡಿಸಲು. ಅಲ್ಲಿ ಅಮ್ಮನ ಜೊತೆ ಸಂಸಾರ. ಅಮ್ಮ ಅಲ್ಲಿ ಇಲ್ಲಿ ಮನೆಗೆಲಸ ಮಾಡಿಕೊಂಡಿರುತ್ತಾಳೆ. ನಿಮ್ಮಿ ಅಮ್ಮನ ಜೊತೆ ಕೆಲವೊಮ್ಮೆ ಆ ಮನೆಗೆಳಿಗೆ ಹೋಗುವುದೂ ಇದೆ. ಅಮ್ಮ ಕೆಲಸ ಮಾಡುತ್ತಿದ್ದಾಗ ನಿಮ್ಮಿ ಬೀದಿಯ ಬದಿಯಲ್ಲಿರುವ ಕಸದ ತೊಟ್ಟಿ ಜಾಲಾಡುತ್ತಿರುತ್ತಾಳೆ. ಪ್ಲಾಸ್ಟಿಕ್, ಡಬ್ಬ, ಕಾಗದ, ಇತ್ಯಾದಿಗಳೆಲ್ಲ ಸಂಗ್ರಹಿಸಿ ಪಕ್ಕದ ಬೀದಿಯ ಖಾನ್ ಸಾಹೇಬನಿಗೆ ಕೊಟ್ಟರೆ ಕೈಗೆ ಸ್ವಲ್ಪ ಚಿಲ್ಲರೆ ಕಾಸು ಬೀಳುವುದು. ಒಂದು ಹೊತ್ತಿನ ಹೊಟ್ಟೆಯ ಸಮಸ್ಯೆ ಪರಿಹಾರವಾದಂತೆ. ಕಸದ ತೊಟ್ಟಿಯಲ್ಲೇ ಅಕೆಗೆ ಕೆಲವೊಮ್ಮೆ ಉಪಯುಕ್ತ ಸಾಮಾನು ಸಿಕಿದ್ದೂ ಇದೆ. ಉದಾಹರಣೆಗೆ ಕಳೆದ ತಿಂಗಳು ಸಿಕ್ಕಿದ ಪೆನ್ನು. ಶಾಲೆಗೆ ಸರಿಯಾಗಿ ಹೋಗದಿದ್ದರೂ ಅಲ್ಪ ಸ್ವಲ್ಪ ಬರೆಯಲು ಆಕೆಗೆ ಗೊತ್ತಿದೆ. ಆ ಪೆನ್ನು ಈಗಲೂ ನಿಮ್ಮಿಯ ಬಳಿ ಇದೆ.

ದಿನಕ್ಕೊಂದು ಕಥೆ

- ಡಾ| ಅನುಪಮ ನಿರಂಜನ

ಮೂರ್ಖ ಮೊಸಳೆ

ಒಂದು ನದಿಯಲ್ಲಿ ಒಂದು ಮೊಸಳೆಯಿತ್ತು. ಅದು ಮುದಿಯಾಗಿತ್ತು. ಪ್ರಾಣಿಗಳನ್ನು ಬೇಟೆ ಆಡಿ ತಿನ್ನಲು ಸಾಧ್ಯವಾಗುತ್ತಿರಲಿಲ್ಲ. ಆದುದರಿಂದ ಅದು ನರಿಯನ್ನು ಕರೆದು, ``ನರಿರಾಯ, ನೀನು ಇನ್ನು ಮೇಲೆ ನನ್ನ ಮಂತ್ರಿ. ನಿನ್ನ ಕೆಲಸವೇನೆಂದರೆ ನಂಗೆ ದಿನಕ್ಕೊಂದು ಪ್ರಾಣೀನ ಆಹಾರವಾಗಿ ತಂದುಕೊಡೋದು” ಎಂದಿತು. ಅಳಿದುಳಿದ ಮಾಂಸ ತನಗೆ ಸಿಗುವುದೆಂಬ ಆಶೆಯಿಂದ ನರಿ ``ಆಗಲಿ” ಎಂದಿತು.