Press "Enter" to skip to content

Posts published in “ಲೇಖನ”

ವೈವಿಧ್ಯಮಯ ವಿಷಯಗಳ ಬಗ್ಗೆ ವೈವಿಧ್ಯಮಯ ಲೇಖನಗಳು

ಕನ್ನಡ ಸಂಸ್ಕೃತಿ – ನಮ್ಮ ಹೆಮ್ಮೆ – ಭಾಗ – ೨

- ಡಾ| ಎಂ ಚಿದಾನಂದ ಮೂರ್ತಿ

ಸ್ವಾಭಿಮಾನ

ಕನ್ನಡ ಸಂಸ್ಕೃತಿಯ ತಿರುಳನ್ನು ಒಂದೆರಡು ಮಾತುಗಳಲ್ಲಿ ವಿವರಿಸಿ ಎಂದು ಯಾರಾದರೂ ಕೇಳಿದರೆ ಅವರಿಗೆ ನಾನು ಕೊಡುವ ಉತ್ತರ: ``ಸ್ವಾಭಿಮಾನ ಮತ್ತು ಸಮನ್ವಯ". ಸ್ವಾಭಿಮಾನವೆಂದರೆ ತನ್ನ ಬಗ್ಗೆ ಮತ್ತು ತನ್ನತನದ ಬಗ್ಗೆ ಇರುವ ಪೂರ್ಣ ಅರಿವು ಮತ್ತು ವಿಶ್ವಾಸ. ಸ್ವಾಭಿಮಾನವೆಂದರೆ ಅಹಂಕಾರವಲ್ಲ. ಅಹಂಕಾರವು ಬಹುತೇಕ ಸ್ವಾರ್ಥಪರವೂ ಇತರ ಯಾರನ್ನೇ ಗುರುತಿಸದೆ ತನ್ನನ್ನು ಮಾತ್ರ ಎತ್ತಿ ಹಿಡಿದುಕೊಳ್ಳುವ ಸ್ವಪ್ರೇಮವೂ ಆಗಿದ್ದು ಟೊಳ್ಳುತನವನ್ನು ಬೆಳೆಸಿಕೊಂಡಿರುವ ಸ್ವಪ್ರತಿಷ್ಠೆಯ ಪ್ರತೀಕ. ಸ್ವಾಭಿಮಾನಿಯು ಬೆಳೆದ ಮತ್ತು ಬೆಳೆಯುವ ವ್ಯಕ್ತಿಯಾದುದರಿಂದ ಅವನು ಇತರ ವ್ಯಕ್ತಿ ಅಥವಾ ವ್ಯಕ್ತಿಗಳ ದೊಡ್ಡತನವನ್ನು ಗುರುತಿಸಲು ಸಿದ್ಧನಿರುತ್ತಾನೆ. ಸ್ವಾಭಿಮಾನವೆನ್ನುವುದು ಎರಡು ಮುಖಗಳ ನಾಣ್ಯವಿದ್ದಂತೆ - ನಾನು ಇನ್ನೊಬ್ಬನಿಗಿಂತ ಕಡಿಮೆ ಅಲ್ಲವೆಂಬ ನಂಬಿಕೆ ಇರುವಂತೆಯೇ ಇತರರೂ ತನಗಿಂತ ಕಡಮೆ ಇರಲಾರರು ಎಂಬ ನಂಬಿಕೆಯು ಅವನಿಗಿರುತ್ತದೆ. ಅವನು ಎಂದೂ ಇನ್ನೊಬ್ಬರ ನೆರಳಾಗಿರಲು ಬಯಸದೆ ತನ್ನ ವಿಶಿಷ್ಟ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಲು ಯತ್ನಿಸುತ್ತಾನೆ. ಯಾವುದೇ ಕ್ಷೇತ್ರದಲ್ಲಾಗಲಿ ಅಂತಹ ಸ್ವಾಭಿಮಾನಿಗಳಿಂದ ಮಾತ್ರವೇ ಮೌಲಿಕ ಕಾರ್ಯಗಳು ನಡೆಯುತ್ತವೆ.

ಕನ್ನಡ ಸಂಸ್ಕೃತಿ – ನಮ್ಮ ಹೆಮ್ಮೆ – ಭಾಗ – ೧

- ಡಾ| ಎಂ. ಚಿದಾನಂದ ಮೂರ್ತಿ

ಕೆಲವರಿಗೆ ಕರ್ನಾಟಕವನ್ನು ಪ್ರೀತಿಸುವುದು ಸಂಕುಚಿತ ದೃಷ್ಟಿಯೆನ್ನಿಸುತ್ತದೆ. ಅವರಿಗೆ ಭಾರತ ಮಾತ್ರ ಮುಖ್ಯ ; ರಾಷ್ಟ್ರಪ್ರೇಮವೊಂದೇ ದೇಶಪ್ರೇಮ. ಕರ್ನಾಟಕ ಪ್ರೇಮ ಎಂಬ ಮಾತು ಅವರಿಗೆ ಅರ್ಥಹೀನ. ಕನ್ನಡ ನಾಡು, ಕನ್ನಡ ನುಡಿಗಳನ್ನು ಕೊಂಡಾಡುವುದು ಅವರಿಗೆ ರಾಷ್ಟ್ರದ್ರೋಹವಾಗಿಯೂ ಕಂಡಿದೆ. ಭಾರತೀಯ ಸಂಸ್ಕೃತಿಯೊಂದು ಇರುವಂತೆ ಕರ್ನಾಟಕ ಸಂಸ್ಕೃತಿಯೆಂಬುದೊಂದು ಅವರ ಪಾಲಿಗೆ ಇಲ್ಲ. ಇದು ಸರಿಯೋ? ವಿಚಾರ ಮಾಡೋಣ.

ಕೊರಳ್‌ಗೆ ಬೆರಳ್

- ಡಾ. ಯು. ಬಿ. ಪವನಜ


ಈಗ ಯುಎಸ್‌ಬಿ ಡ್ರೈವ್‌ಗಳ ಕಾಲ ಬಂದಿದೆ. ಗಣಕದ ಮಾಹಿತಿಗಳಿಗೆ ಒಂದು ಥಂಬ್ ಡ್ರೈವ್, ಹಾಡು ಕೇಳಲೊಂದು ಎಂಪಿ-೩ ಪ್ಲೇಯರ್, ಫೋಟೋ ತೆಗೆಯಲೊಂದು ಯುಎಸ್‌ಬಿ ಕ್ಯಾಮರಾಗಳನ್ನು ಕುತ್ತಿಗೆಯಲ್ಲಿ ಜೋತಾಡಿಸಿ ಅಲೆದಾಡುವ ಆಧುನಿಕ ಅಂಗುಲಿಮಾಲರನ್ನು ಬೀದಿಗಳಲ್ಲಿ ನೋಡುವ ಕಾಲ ದೂರವಿಲ್ಲ.

 

ಬೆಂಗಳೂರಿನ ಪಂಚಶೂಲಗಳು!

- ಡಾ| ಶ್ರೀನಿವಾಸ ಹಾವನೂರ

ಮೂರು ಮೊನೆಗಳುಳ್ಳ ಆಯುಧ -ತ್ರಿಶೂಲವನ್ನು ಬಲ್ಲೆವು. ಬೆಂಗಳೂರಿನದಕ್ಕೆ ಐದು ಮೊನೆಗಳು. ಆದರೆ ಇದರಿಂದ ಮನುಷ್ಯ ಸಾಯಲಿಕ್ಕಿಲ್ಲ. ಬದಲಾಗಿ ವಿಲಿವಿಲಿ ಒದ್ದಾಡುತ್ತಾನೆ. ಈ ಪಂಚಶೂಲದ ಪ್ರಹಾರವನ್ನು ನನ್ನ ಹಾಗೆ ಬೆಂಗಳೂರು ವಾಸಿಗಳೆಲ್ಲ ನಿತ್ಯ ಅನುಭವಿಸುತ್ತಿದ್ದಾರೆ. ಏನೋ, ರಾಜಧಾನಿಯಲ್ಲಿ ಜನ ಸುಖವಾಗಿದ್ದಾರೆ? ಎಂದು ಹೊರಗಿನವರು ತಿಳಿದಿರಬಹುದು. ಆ ತಪ್ಪು ಕಲ್ಪನೆಯನ್ನು ಹೋಗಲಾಡಿಸಲು, ಈ ಲೇಖ.

ಕರ್ನಾಟಕದ ದೃಶ್ಯಕಲಾ ಪರಂಪರೆ : ಭಾಗ ೨

- ಕೆ. ವಿ. ಸುಬ್ರಹ್ಮಣ್ಯಂ

ಹಲವು ನೆಲೆಗಳಲ್ಲಿ ನಡೆದು ಬಂದ ನಮ್ಮ ವಾಸ್ತುಶಿಲ್ಪ

ಕೆಂಪು ಹಾಗೂ ಬಿಳಿ ಬಣ್ಣಗಳೇ ಹೆಚ್ಚು ಬಳಸಲ್ಪಟ್ಟಿರುವ ನಮ್ಮ ದೇಶದ ಬಂಡೆ-ಗುಹಾಶ್ರಯ ಚಿತ್ರಗಳಂತೆ, ಕರ್ನಾಟಕದ ಚಿತ್ರಗಳೂ ಮೂಡಿಬಂದಿವೆ. ಸಾಂಕೇತಿಕ ರೂಪಗಳನ್ನು ಗುಲ್ಬರ್ಗದ ಯಾದಗೀರ್ ಬಳಿಯ ಬಿಳಿಚಕ್ರದ ಎತ್ತರದ ಬೆಟ್ಟದ ತುದಿಯ ಬಂಡೆಯಾಶ್ರಯ, ಆನೆಗೊಂದಿಯ ಚಿತ್ರ ಸಮೂಹಗಳಲ್ಲಿ ಕಾಣಬಹುದು. ಈ ಚಿತ್ರಭಾಷೆಯ ಬಗೆಗೆ ಇಂದಿಗೂ ಆ ಹಳ್ಳಿಗಳ ಜನರಿಗೆ ಕುತೂಹಲವಿದೆ. ಈಗಾಗಲೇ ಹೇಳಿರುವ ಬಹುತೇಕ ಶಿಲಾಶ್ರಯಗಳಲ್ಲಿ ಆದಿಯ ಜನರು (ಕಲಾವಿದರು) ಕಂದು ಅಥವಾ ಕಪ್ಪುಬಣ್ಣದ ಕಬ್ಬಿಣದ ಅದಿರನ್ನು ಬಳಸಿದ್ದಾರೆ. ಮಣ್ಣಿನ ಮೂಲದ ಬಣ್ಣಗಳನ್ನು ದುಡಿಸಿಕೊಂಡಿದ್ದಾರೆ. ನೂತನ ಶಿಲಾಯುಗಕ್ಕಿಂತಲೂ ಸ್ವಲ್ಪ ಹಿಂದಿನ, ಬಾದಾಮಿಯ ಬಳಿಯ ಕುಟಕನ ಕೇರಿ ಹತ್ತಿರದ ಅರೆಗುಡ್ಡ ಮತ್ತು ಹಿರೇಗುಡ್ಡಗಳ ಶಿಲಾಶ್ರಯಗಳಲ್ಲಿನ ಕೆಮ್ಮಣ್ಣು ಬಣ್ಣದ ಚಿತ್ರಗಳಲ್ಲಿ ಮಾನವ ರೂಪಗಳೇ ಹೆಚ್ಚು. ಸಾಮಾನ್ಯ ಕಣ್ಣಿಗೆ ತಟಕ್ಕನೆ ಕಾಣದ, ತರಬೇತಾದ ಕಣ್ಣಿಗೆ ಕಾಣುವ ಈ ಚಿತ್ರಗಳು ಉದ್ದನೆಯ ಮುಂಡ, ಉರುಟಾದ ಕೈಕಾಲುಗಳನ್ನು ಹೊಂದಿವೆ.

ಕರ್ನಾಟಕ ಚಿತ್ರಕಲಾ ಪರಂಪರೆ : ಭಾಗ ೧

- ಕೆ. ವಿ. ಸುಬ್ರಹ್ಮಣ್ಯಂ

ಕನ್ನಡ ದೃಶ್ಯಕಲೆಯ ಪ್ರಾರಂಭದ ಚಹರೆಗಳು

ವ್ಯಕ್ತಿ ವಿಶಿಷ್ಟ ಸಾಧನೆಯ ಪರಮಾರಾಧಕರಂತೆ ಸೃಷ್ಟಿಸುತ್ತಿರುವ, ೨೧ನೇ ಶತಮಾನದ ಪ್ರಾರಂಭದ ಇಂದಿನ ದಿನಗಳ ಕನ್ನಡ ಸಂಸ್ಕೃತಿಯ ದೃಶ್ಯಕಲೆಯ ಕಲಾವಿದ/ ಕಲಾವಿದೆಯರ ಅಪೂರ್ಣ ವರ್ತಮಾನ, ಇತಿಹಾಸವಾಗಲಿರುವ ಭವಿಷ್ಯದಲ್ಲಿ ವಿಶಿಷ್ಟ ಆಯಾಮಗಳನ್ನು ಪಡೆದುಕೊಳ್ಳಬಹುದು. ಆದರೆ ಈ ಹಿಂದಿನ ನಮ್ಮ ದೃಶ್ಯಕಲೆಯ ಇತಿಹಾಸ ನಮಗೆ ತೆರೆದುಕೊಟ್ಟಿರುವ ಕೌತುಕದ ಕಿಟಕಿಗಳೇನೂ ಸಾಮಾನ್ಯವಲ್ಲ! ಆ ದೃಶ್ಯಕಲೆಯ ರೂಪ, ಅಂಶಗಳ ಸೃಷ್ಟಿ ಪ್ರಕ್ರಿಯೆಯ ಮೊದಲ ಹೆಜ್ಜೆಗಳು ನಿಗೂಢವೂ ಹೌದು. ಆ ಮೊದಲ ಹೆಜ್ಜೆಗಳ, ಆದಿಮಾನವನ ಕಲೆಯನ್ನು ಇತಿಹಾಸ ಪೂರ್ವಕಲೆ, ಪ್ರಾಗೈತಿಹಾಸಿಕ ಕಲೆ ಎಂದೂ ಕರೆಯಲಾಗಿದೆ.

ಸಾಪ್ತಾಹಿಕ ಪುರವಣಿಗಳು ಮತ್ತು ಸಾಹಿತ್ಯದ ಕೆಲಸ

- ಬೇಳೂರು ಸುದರ್ಶನ

ಸಾಪ್ತಾಹಿಕ ಪುರವಣಿಗಳು ಅಂದಕೂಡ್ಲೇ ನಮಗೆ ಸಾಮಾನ್ಯವಾಗಿ ನೆನಪಾಗೋದು ಒಂದು ಒಳ್ಳೆ ಮುಖಪುಟ ಲೇಖನ, ಒಂದು ದೊಡ್ಡ ಕಥೆ ಜೊತೆಗೆ ಒಂದು ಕವನ. ಇದೊಂಥರ ಸಿದ್ಧ ಮಾದರಿ ಅನ್ನೋ ಭಾವನೆ ಬರೋದಕ್ಕೇ ಸಾಧ್ಯವಿಲ್ಲದ ಹಾಗೆ ಈ ಸಾಪ್ತಾಹಿಕ ಪುರವಣಿಗಳನ್ನು ನಾವು ನೋಡ್ತಾ ಇದ್ದೇವೆ.

ಶುದ್ಧಾಶುದ್ಧ ಕನ್ನಡ

- ಪ್ರೊ| ಎಂ. ರಾಜಗೋಪಾಲಾಚಾರ್ಯ

ಕನ್ನಡದಲ್ಲಿ ಬಹಳವಾಗಿ ರೂಢಿಯಲ್ಲಿರುವ ಕೆಲವು ಸಂಸ್ಕೃತ ಪದಗಳ ಕಾಗುಣಿತದ ವ್ಯತ್ಯಾಸದಿಂದ ಅರ್ಥಭೇದವುಂಟಾಗುವುದು. ಒಂದೇ ಪದಕ್ಕೆ ಹಲವಾರು ರೂಪಗಳಿರುವುದೂ ಉಂಟು. ಆಗ ಅವುಗಳ ಕಾಗುಣಿತದಲ್ಲಿ ವ್ಯತ್ಯಾಸವಿದ್ದರೂ ಅರ್ಥಭೇದವಿಲ್ಲ. ಮುಂದಿನ ಉಲ್ಲೇಖದಲ್ಲಿ ಪ್ರಚಲಿತವಾಗಿರುವ ಅಂತಹ ಕೆಲವು ಪದಗಳನ್ನು ಕೊಟ್ಟಿದೆ. ಇದು ಸ್ಥೂಲದರ್ಶನವೇ ಹೊರತು ಎಲ್ಲ ಪದಗಳೂ ಇಲ್ಲಿ ಸೇರಿಲ್ಲ.

ಮಾಹಿತಿ ತಂತ್ರಜ್ಞಾನ ಮತ್ತು ಇಂಗ್ಲೀಷ್‌ನ ‘ಪಿತ್ತ’

ಡಾ. ಯು. ಬಿ. ಪವನಜ

ಇನ್ಫೋಸಿಸ್ ನಾರಾಯಣಮೂರ್ತಿಯವರಿಗೆ ೧೯೯೯ರಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಿದ ಸಂದರ್ಭದಲ್ಲಿ ಬೆಂಗಳೂರು ಆಕಾಶವಾಣಿ ಅವರೊಂದಿಗೆ ಸಾರ್ವಜನಿಕರಿಂದ ಫೋನ್-ಇನ್ ಕಾರ್ಯಕ್ರಮವನ್ನು ನೇರ ಪ್ರಸಾರಗೊಳಿಸಿತ್ತು. ಆ ಸಂದರ್ಭದಲ್ಲಿ ನಾನು ಸಂದರ್ಶಕನಾಗಿ ಭಾಗವಹಿಸಿದ್ದೆ. ಆ ದಿನ ನಾನು ಕೇಳಿದ ಒಂದು ಪ್ರಶ್ನೆ ಹೀಗಿತ್ತು: “ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಮೇಲೆ ಬರಬೇಕಾದರೆ ಒಂದನೆ ತರಗತಿಯಿಂದಲೇ ಇಂಗ್ಲೀಷ್ ಮಾಧ್ಯಮದಲ್ಲಿ ಕಲಿಯಬೇಕು ಎಂದು ಬಹುಪಾಲು ಜನರು ತಿಳಿದುಕೊಂಡಿದ್ದಾರೆ ಇದು ನಿಜವೇ?”. ಅದಕ್ಕೆ ನಾರಾಯಣ ಮೂರ್ತಿಯವರು ನೀಡಿದ ಉತ್ತರ ಎಲ್ಲರೂ ಗಮನಿಸಬೇಕಾದುದಾಗಿದೆ: “ಈ ನಂಬಿಕೆ ಸರಿಯಲ್ಲ. ಒಳ್ಳೆಯ ಆಲೋಚನಾ ಶಕ್ತಿ, ಮುಖ್ಯವಾಗಿ ತರ್ಕಬದ್ಧವಾಗಿ ಯೋಚಿಸುವ ಶಕ್ತಿ ಇದ್ದರೆ ಸಾಕು. ಹತ್ತನೆ ತರಗತಿಯ ತನಕ ಕನ್ನಡ ಮಾಧ್ಯಮದಲ್ಲಿ ಕಲಿತರೆ ಏನೂ ಅಡ್ಡಿಯಿಲ್ಲ. ಒಳ್ಳೆಯ ಮೆದುಳಿಗೂ ವಿದ್ಯಾಭ್ಯಾಸದ ಮಾಧ್ಯಮಕ್ಕೂ ಯಾವುದೇ ಸಂಬಂಧವಿಲ್ಲ.”