ಕನ್ನಡ ಬ್ಲಾಗೋತ್ತಮರ ಸಭೆ
Sunday, March 9th, 2008ಕನ್ನಡ ಭಾಷೆಯಲ್ಲಿ ಬ್ಲಾಗಿಸುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಇದು ನಿಜಕ್ಕೂ ಸಂತಸದ ಸುದ್ದಿ. ಈ ಎಲ್ಲ ಬ್ಲಾಗೋತ್ತಮರುಗಳು ಎಂದಾದರೂ ಮುಖಾಮುಖಿ ಭೇಟಿಯಾದುದು ಇದೆಯೇ? ಬಹುಶಃ ಇಲ್ಲ. ಕೆಲವು ಮಂದಿ ಅಲ್ಲಿ ಇಲ್ಲಿ ಭೇಟಿಯಾಗಿರಬಹುದು. ಆದರೆ ಬ್ಲಾಗಿಗಳೇ ಪ್ರತ್ಯೇಕವಾಗಿ ಸಭೆ ಸೇರಿದ್ದು ಇಲ್ಲ. ಭಾರತೀಯ ಬ್ಲಾಗಿಗಳ ಸಭೆ ಹಲವು ಬಾರಿ ಬೇರೆ ಬೇರೆ ನಗರಗಳಲ್ಲಿ ಜರುಗಿವೆ. ಆದರೆ ಕನ್ನಡ ಬ್ಲಾಗಿಗಳ ಸಭೆ ಇದುವರೆಗೆ ಜರುಗಿಲ್ಲ.
ಬೆಂಗಳೂರು, ಜನವರಿ ೨೭, ೨೦೦೮: ಬೆಂಗಳೂರಿನ ದಕ್ಷಿಣಕ್ಕೆ ಕನಕಪುರ ರಸ್ತೆಗೆ ಹೊಂದಿಕೊಂಡಿರುವ ಕಗ್ಗಲಿಪುರದಲ್ಲಿರುವ ಅಮೃತಧಾರಾ ಗೋಶಾಲೆಯ ಆವರಣದಲ್ಲಿ ಫೆಬ್ರವರಿ ೧೭ರಂದು ಸಮರ್ಪಣ – ೨೦೦೮ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಪ್ರಧಾನವಾಗಿ ರೈತರ ಸಮಾವೇಶ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿರುತ್ತವೆ. ಪೂರ್ವಾಹ್ನ ೧೧ ಘಂಟೆಗೆ ರೈತರ ಸಮಾವೇಶವಿರುತ್ತದೆ. ಕನಕಪುರ ತಾಲೂಕಿನ ರೈತರ ಸಮಾವೇಶದಲ್ಲಿ “ಗೋಸಂರಕ್ಷಣೆಯ ಅಗತ್ಯ”, “ಗೋವು ಮತ್ತು ಆರ್ಥಿಕತೆ” ಈ ವಿಷಯಗಳ ಬಗ್ಗೆ ಉಪನ್ಯಾಸ ಮತ್ತು ಚರ್ಚೆಗಳಿರುತ್ತವೆ. ಅಪರಾಹ್ನದ ಕಾರ್ಯಕ್ರಮಗಳಲ್ಲಿ ಗೋವಿಗಾಗಿ ಸದ್ದಿಲ್ಲದೆ ದುಡಿಯುತ್ತಿರುವ ಎಲೆಮರೆಯ ಕಾಯಿಗಳಿಗೆ ಸೇವಾಪುರಸ್ಕಾರ ನೀಡಲಾಗುತ್ತದೆ. ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಯವರ ಅಶೀರ್ವಚನದ ನಂತರ ಸಾಂಸ್ಕೃತಿಕ ಕಾರ್ಯಕ್ರಮವಿರುತ್ತವೆ. ಕದ್ರಿ ಗೋಪಾಲನಾಥರ ಶಿಷ್ಯ ಶ್ರೀಧರ ಸಾಗರ ಅವರಿಂದ ಸ್ಯಾಕ್ಸಾಫೋನ್ ವಾದನ, ರವಿಚಂದ್ರ ಮತ್ತು ತಂಡದವರಿಂದ ಕೊಳಲು ಪ್ರಧಾನವಾಗಿರುವ ವಾದ್ಯವೃಂದ ರೂಪಕ ಹಾಗೂ ಹೊಸನಗರದ ಶ್ರೀರಾಮಚಂದ್ರಾಪುರ ಮಠದ ತಂಡದವರಿಂದ ನೃತ್ಯ ರೂಪಕವಿರುತ್ತದೆ. ಕೊನೆಯಲ್ಲಿ ಗೋವುಗಳಿಗೆ ನೀರಾಜನ ಮತ್ತು ದೀಪೋತ್ಸವ ಕಾರ್ಯಕ್ರಮಗಳಿರುತ್ತವೆ. ಸಮಸ್ತರು ಈ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಕೋರಲಾಗಿದೆ. ಇಡೀ ದಿನ ಗವ್ಯ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಹಾಗೂ ಗವ್ಯ ಚಿಕಿತ್ಸೆಯ ವ್ಯವಸ್ಥೆ ಇರುತ್ತದೆ.