ಕನ್ನಡ ಬ್ಲಾಗೋತ್ತಮರ ಸಭೆ

Sunday, March 9th, 2008

ಕನ್ನಡ ಭಾಷೆಯಲ್ಲಿ ಬ್ಲಾಗಿಸುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಇದು ನಿಜಕ್ಕೂ ಸಂತಸದ ಸುದ್ದಿ. ಈ ಎಲ್ಲ ಬ್ಲಾಗೋತ್ತಮರುಗಳು ಎಂದಾದರೂ ಮುಖಾಮುಖಿ ಭೇಟಿಯಾದುದು ಇದೆಯೇ? ಬಹುಶಃ ಇಲ್ಲ. ಕೆಲವು ಮಂದಿ ಅಲ್ಲಿ ಇಲ್ಲಿ ಭೇಟಿಯಾಗಿರಬಹುದು. ಆದರೆ ಬ್ಲಾಗಿಗಳೇ ಪ್ರತ್ಯೇಕವಾಗಿ ಸಭೆ ಸೇರಿದ್ದು ಇಲ್ಲ. ಭಾರತೀಯ ಬ್ಲಾಗಿಗಳ ಸಭೆ ಹಲವು ಬಾರಿ ಬೇರೆ ಬೇರೆ ನಗರಗಳಲ್ಲಿ ಜರುಗಿವೆ. ಆದರೆ ಕನ್ನಡ ಬ್ಲಾಗಿಗಳ ಸಭೆ ಇದುವರೆಗೆ ಜರುಗಿಲ್ಲ.

ರೈತರ ಆತ್ಮಹತ್ಯೆ ತಡೆಗೆ ಉಪಾಯ: ಗೋ ಆಧಾರಿತ ಕೃಷಿ

Sunday, February 17th, 2008

ಕಗ್ಗಲಿಪುರ ಗೋಲೋಕದಲ್ಲಿ ರೈತ ಸಮಾವೇಶ

ಬೆಂಗಳೂರು, ಫೆ, ೧೭, ೨೦೦೮: ಗೋ ಆಧಾರಿತ ಸ್ವಾವಲಂಬಿ ಕೃಷಿಯಿಂದ ಮಾತ್ರ ರೈತರ ಆತ್ಮಹತ್ಯೆಗಳನ್ನು ನಿಲ್ಲಿಸಬಹುದು. ಆದುದರಿಂದ ಸರ್ಕಾರಗಳು ಗೋ ಆಧಾರಿತ ಕೃಷಿಗೆ ಬೆಂಬಲವಾಗಿ ನಿಲ್ಲಬೇಕು ಎಂದು ರಾಜ್ಯ ಪ್ರಶಸ್ತಿ ವಿಜೇತ ಗೋ ಆಧಾರಿತ ಕೃಷಿಕ ರಮೇಶರಾಜು ಅವರು ಇಲ್ಲಿ ಆಗ್ರಹಿಸಿದರು.

ಕಗ್ಗಲಿಪುರದಲ್ಲಿ ಸಮರ್ಪಣ – ೨೦೦೮

Sunday, January 27th, 2008

ಬೆಂಗಳೂರು, ಜನವರಿ ೨೭, ೨೦೦೮: ಬೆಂಗಳೂರಿನ ದಕ್ಷಿಣಕ್ಕೆ ಕನಕಪುರ ರಸ್ತೆಗೆ ಹೊಂದಿಕೊಂಡಿರುವ ಕಗ್ಗಲಿಪುರದಲ್ಲಿರುವ ಅಮೃತಧಾರಾ ಗೋಶಾಲೆಯ ಆವರಣದಲ್ಲಿ ಫೆಬ್ರವರಿ ೧೭ರಂದು ಸಮರ್ಪಣ – ೨೦೦೮ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಪ್ರಧಾನವಾಗಿ ರೈತರ ಸಮಾವೇಶ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿರುತ್ತವೆ. ಪೂರ್ವಾಹ್ನ ೧೧ ಘಂಟೆಗೆ ರೈತರ ಸಮಾವೇಶವಿರುತ್ತದೆ. ಕನಕಪುರ ತಾಲೂಕಿನ ರೈತರ ಸಮಾವೇಶದಲ್ಲಿ “ಗೋಸಂರಕ್ಷಣೆಯ ಅಗತ್ಯ”, “ಗೋವು ಮತ್ತು ಆರ್ಥಿಕತೆ” ಈ ವಿಷಯಗಳ ಬಗ್ಗೆ ಉಪನ್ಯಾಸ ಮತ್ತು ಚರ್ಚೆಗಳಿರುತ್ತವೆ. ಅಪರಾಹ್ನದ ಕಾರ್ಯಕ್ರಮಗಳಲ್ಲಿ ಗೋವಿಗಾಗಿ ಸದ್ದಿಲ್ಲದೆ ದುಡಿಯುತ್ತಿರುವ ಎಲೆಮರೆಯ ಕಾಯಿಗಳಿಗೆ ಸೇವಾಪುರಸ್ಕಾರ ನೀಡಲಾಗುತ್ತದೆ. ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಯವರ ಅಶೀರ್ವಚನದ ನಂತರ ಸಾಂಸ್ಕೃತಿಕ ಕಾರ್ಯಕ್ರಮವಿರುತ್ತವೆ. ಕದ್ರಿ ಗೋಪಾಲನಾಥರ ಶಿಷ್ಯ ಶ್ರೀಧರ ಸಾಗರ ಅವರಿಂದ ಸ್ಯಾಕ್ಸಾಫೋನ್ ವಾದನ, ರವಿಚಂದ್ರ ಮತ್ತು ತಂಡದವರಿಂದ ಕೊಳಲು ಪ್ರಧಾನವಾಗಿರುವ ವಾದ್ಯವೃಂದ ರೂಪಕ ಹಾಗೂ ಹೊಸನಗರದ ಶ್ರೀರಾಮಚಂದ್ರಾಪುರ ಮಠದ ತಂಡದವರಿಂದ ನೃತ್ಯ ರೂಪಕವಿರುತ್ತದೆ. ಕೊನೆಯಲ್ಲಿ ಗೋವುಗಳಿಗೆ ನೀರಾಜನ ಮತ್ತು ದೀಪೋತ್ಸವ ಕಾರ್ಯಕ್ರಮಗಳಿರುತ್ತವೆ. ಸಮಸ್ತರು ಈ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಕೋರಲಾಗಿದೆ. ಇಡೀ ದಿನ ಗವ್ಯ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಹಾಗೂ ಗವ್ಯ ಚಿಕಿತ್ಸೆಯ ವ್ಯವಸ್ಥೆ ಇರುತ್ತದೆ.

ಮಾತೆಯರ ಮಹಾ ಸಂಗಮ ಕೋಟಿ ನೀರಾಜನ

Thursday, November 15th, 2007

ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿಯವರಿಂದ ಗೋ ಸಂರಕ್ಷಣೆಯ ಇನ್ನೊಂದು ಹೆಜ್ಜೆ.
ಅರಮನೆ ಮೈದಾನದಲ್ಲಿ ನ. ೧೮ಕ್ಕೆ ಲಕ್ಷ ಮಹಿಳೆಯರಿಂದ ಗೋ ಮಾತೆಗೆ ಕೋಟಿ ಆರತಿ

ಜೆ.ಎಸ್.ಡಬ್ಲ್ಯು ಸ್ಟೀಲ್‌ಗೆ ಪ್ರಶಸ್ತಿ

Saturday, November 10th, 2007

ಬೆಂಗಳೂರು, ನವೆಂಬರ್‍ ೯, ೨೦೦೭: ಜೆ ಎಸ್ ಡಬ್ಲ್ಯು ಸ್ಟೀಲ್ ಲಿಮಿಟೆಡ್ ವಿಜಯನಗರ ಸ್ಥಾವರವು ಸತತ ಮೂರನೇ ವರ್ಷವೂ ಸಿ ಐ ಐ – ಎಕ್ಸಿಮ್ ಬ್ಯಾಂಕಿನ ಬ್ಯುಸಿನೆಸ್ ಎಕ್ಸೆಲೆನ್ಸ್ ಅವಾರ್ಡ್ ೨೦೦೭ರಲ್ಲಿ ಗಮನಾರ್ಹ ಸಾಧನೆಯ ಕಮೆಂಡೇಶನ್ ಸರ್ಟಿಫಿಕೇಟ್ ಪಡೆದು ಹ್ಯಾಟ್ರಿಕ್ ಸಾಧಿಸಿದೆ. ಕಳೆದ ಎರಡು ವರ್ಷಗಳಲ್ಲೂ ಸಂಸ್ಥೆಯು ಈ ಕಮೆಂಡೇಶನ್ ಸರ್ಟಿಫಿಕೇಟನ್ನು ಪಡೆದಿತ್ತು. ಇದೇ ನವೆಂಬರ್ ೧ರಂದು ಬೆಂಗಳೂರಿನಲ್ಲಿ ನಡೆದ ಸಿ ಐ ಐ ಇನ್ಸ್ಟಿಟ್ಯೂಟ್ ಆಫ್ ಕ್ವಾಲಿಟಿಯ ೧೫ನೇ ಗುಣಮಟ್ಟ ಶೃಂಗಸಭೆಯಲ್ಲಿ ಈ ಪ್ರಕಟಣೆ ಮಾಡಲಾಗಿದೆ. ಇದು ಭಾರತದಲ್ಲಿ ವ್ಯವಹಾರ ದಕ್ಷತೆಗಾಗಿ ಇರುವ ಕೆಲವೇ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದಾಗಿದೆ.

ಈಶ್ವರಪ್ರಸಾದರಿಗೆ ಕೆಂಪೇಗೌಡ ಪ್ರಶಸ್ತಿ

Thursday, August 2nd, 2007

ಬೆಂಗಳೂರು, ಆಗಸ್ಟ್ ೨, ೨೦೦೭: ಸರಕಾರೇತರ ಸಂಸ್ಥೆ ಪರಿಸರದ ಈಶ್ವರಪ್ರಸಾದರಿಗೆ ಕೆಂಪೇಗೌಡ ಪ್ರಶಸ್ತಿ-೨೦೦೭ ನೀಡಲಾಯಿತು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಈ ಪ್ರಶಸ್ತಿಯನ್ನು ಹಲವು ವರ್ಷಗಳಿಂದ ನೀಡುತ್ತಿದೆ. ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದವರಿಗೆ ಈ ಪ್ರಶಸ್ತಿ ನೀಡಲಾಗುತ್ತಿದೆ. ಈಶ್ವರಪ್ರಸಾದರಿಗೆ ಈ ವರ್ಷ ಪರಿಸರ ವಿಭಾಗದಲ್ಲಿ ಈ ಪ್ರಶಸ್ತಿ ನೀಡಲಾಗಿದೆ.

ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ

Friday, July 20th, 2007

ಬೆಂಗಳೂರು, ಜುಲೈ ೨೦- ‘ಮುಂಗಾರುಮಳೆ’ ೨೦೦೬-೦೭ನೇ ಸಾಲಿನ ರಾಜ್ಯ ಅತ್ಯುತ್ತಮ ಚಿತ್ರ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಹಿರಿಯ ನಟಿ ಶ್ರೀಮತಿ ಎಂ.ಎನ್. ಲಕ್ಷ್ಮೀದೇವಿ ಅವರು ೨೦೦೬-೦೭ನೇ ಸಾಲಿನ ಡಾ. ರಾಜ್‌ಕುಮಾರ್ ಪ್ರಶಸ್ತಿಗೆ ಭಾಜನರಾಗಿ’ದ್ದಾರೆ.

ಅಖಿಲ ಕರ್ನಾಟಕ ವಿಜ್ಞಾನ ಸಮ್ಮೇಳನ

Friday, July 13th, 2007

ಬೀದರ್‌ನಲ್ಲಿ ಆಗಸ್ಟ್ ೩ ರಿಂದ ೯ನೇ ಅಖಿಲ ಕರ್ನಾಟಕ ವಿಜ್ಞಾನ ಸಮ್ಮೇಳನ ಪ್ರಾರಂಭ

ಬೆಂಗಳೂರು, ಜುಲೈ ೧೩:- ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ೯ನೇ ಅಖಿಲ ಕರ್ನಾಟಕ ವಿಜ್ಞಾನ ಸಮ್ಮೆಳನವನ್ನು ಬಿ.ವಿ.ಬಿ. ಮಹಾವಿದ್ಯಾಲಯ ಬೀದರ್‌ನಲ್ಲಿ ಬೀದರ್ ವಿಜ್ಞಾನ ಕೇಂದ್ರದ ಸ್ಥಳೀಯ ಸಂಘಟನೆಯಲ್ಲಿ ಆಗಸ್ಟ್ ೩ ರಿಂದ ೫ ರವರೆಗೆ ಏರ್ಪಡಿಸಲಾಗಿದೆ.

ಸರ್ಕಾರದ ನಿಯಮಗಳಿಂದಾಗುವ ತೊಂದರೆಗಳ ನಿವಾರಣೆಗೆ ಸಲಹ

Thursday, June 28th, 2007

ಬೆಂಗಳೂರು ಜೂನ್ ೨೫ ಕರ್ನಾಟಕ ವಿಧಾನ ಮಂಡಲದ ಅಧೀನ ಶಾಸನ ರಚನಾ ಸಮಿತಿಯು ಸರ್ಕಾರದ ಅಧಿನಿಯಮಗಳು, ಅಧಿಸೂಚನೆಗಳು, ನಿಯಮಗಳು, ಉಪನಿಯಮಗಳು ಹಾಗೂ ಆದೇಶಗಳಿಂದ ಸಾರ್ವಜನಿಕರಿಗೆ ಉಂಟಾಗುತ್ತಿರುವ ತೊಂದರೆಗಳನ್ನು ನಿವಾರಿಸಲು, ಸಲಹೆ ಸೂಚನೆಗಳನ್ನು ಸ್ವೀಕರಿಸಲು ಸಮಿತಿಯಿಂದ ಪ್ರತ್ಯೇಕವಾದ ವೆಬ್‌ಸೈಟ್ ತೆರೆದಿದೆ.

ಮಾಹಿತಿ ಹಕ್ಕು ಬ್ಯಾಂಕ್ ಸ್ಥಾಪನೆ

Saturday, June 9th, 2007

ಬೆಂಗಳೂರಿನ ಮಾಹಿತಿ ಹಕ್ಕು ಹೋರಾಟ ಒಕ್ಕೂಟದವರು ಮಾಹಿತಿ ಹಕ್ಕು ಬ್ಯಾಂಕ್ ಸ್ಥಾಪಿಸಿದ್ದಾರೆ.