Press "Enter" to skip to content

Posts published in “Featured Articles”

ಪ್ರವೇಶವಿಲ್ಲದ ಗರ್ಭಗುಡಿಯಲ್ಲಿ ಪೂಜಾರಿಯಾದವರು

- ಪ್ರಕಾಶ ಹೆಬ್ಬಾರ

ನಾಗೇಶ ಹೆಗಡೆ ಎಂದೊಡನೆ ಯಾವುದರಿಂದ ಅವರನ್ನು ಗುರುತಿಸಬೇಕು? ಅವರನ್ನು ನಿಕಟವಾಗಿ ಬಲ್ಲ ಎಲ್ಲರಿಗೂ ಒಂದಲ್ಲ ಒಂದು ಸಂದರ್ಭದಲ್ಲಿ ಈ ತಬ್ಬಿಬ್ಬು ಆಗುತ್ತದೆ. ಮನುಷ್ಯನ ಎಲ್ಲ ಅಂಗಾಂಗಗಳೂ ಪ್ರಮಾಣಬದ್ಧವಾಗಿದ್ದು ಒಂದಕ್ಕೊಂದು ಪೂರಕವಾಗಿ ಕ್ರಿಯಾಶೀಲವಾಗಿರುವಂತೆ ಹೆಗಡೆಯವರ ಸಾಧನೆಯ ನೆಲೆ ಕೂಡ. ಅವರನ್ನು ಅವರವರ ಅಳವಿಗೆ ತಕ್ಕಂತೆ ಭೂವಿಜ್ಞಾನಿ, ಪತ್ರಕರ್ತ, ನುಡಿಚಿತ್ರಕಾರ, ಪರಿಸರವಾದಿ, ಪತ್ರಕರ್ತರ ವೃತ್ತಿಬದುಕನ್ನು ರೂಪಿಸುವಾತ, ಸಂಪಾದಕ, ವಿಜ್ಞಾನ ಸಂವಹನಕಾರ- ಏನೆಲ್ಲಾ ಅನ್ನಬಹುದು. ರೈತರನ್ನು ಪ್ರಗತಿಪರರನ್ನಾಗಿ ಮಾಡಲು ಹೊರಟ, ಸದ್ದಿಲ್ಲದ ಕೃಷಿಕ ಎಂದರೂ ಒಪ್ಪೀತು. ವಾಮನ ತ್ರಿವಿಕ್ರಮನಾಗಿ ಬೆಳೆದು, ಎಷ್ಟು ತಿಣುಕಿದರೂ ಸಮಕಾಲೀನರ ವಿಮರ್ಶೆಗೆ ಸಿಕ್ಕದ ಗಟ್ಟಿ ವ್ಯಕ್ತಿತ್ವ. ನೀವು ಅವರನ್ನು ವೃತ್ತಿಪರ ಛಾಯಾಗ್ರಾಹಕ ಎಂದು ಕರೆದರೆ ಅದಕ್ಕೂ ನ್ಯಾಯ ಒದಗೀತು. ಅವರು ತೆಗೆದ ಕಪ್ಪುಬಿಳುಪಿನ ಚಿತ್ರಗಳನ್ನು ದಿನವಿಡೀ ನೋಡುತ್ತಾ ಹೋದರೂ ಅದೊಂದು ಹೊಸ ಅನುಭವವೇ.

ಬ್ಲಾಗಿಂಗ್ – ಪರ್ಯಾಯ ಪತ್ರಿಕೋದ್ಯಮ

- ಡಾ. ಯು. ಬಿ. ಪವನಜ

ಇತ್ತೀಚೆಗಿನ ದಿನಗಳಲ್ಲಿ ತುಂಬ ಕೇಳಿಬರುತ್ತಿರುವ ಪದ “ಬ್ಲಾಗ್”. ಅದರ ಹಲವು ಪ್ರತ್ಯಯಗಳೇ ಬ್ಲಾಗಿಂಗ್, ಬ್ಲಾಗರ್, ಇತ್ಯಾದಿ. ಈ ಬ್ಲಾಗ್ ಎಂದರೆ ಏನು? ಬ್ಲಾಗ್ ಎಂದರೆ ಒಂದು ರೀತಿಯಲ್ಲಿ ಸಾರ್ವಜನಿಕ ಸ್ವಗತ ಎನ್ನಬಹುದು. ಎಲ್ಲರಿಗೂ ಓದಲು ಅನುಕೂಲವಾಗುವಂತೆ ಅಂತರಜಾಲದಲ್ಲಿ (ಇಂಟರ್‌ನೆಟ್‌ನಲ್ಲಿ) ಇಟ್ಟಂತಹ ತೆರೆದ ದಿನಚರಿ ಅಥವಾ ಡೈರಿ ಎಂದೂ ಕರೆಯಬಹುದು. ಬ್ಲಾಗ್‌ನ ಕ್ರಿಯಾರೂಪವೇ ಬ್ಲಾಗಿಂಗ್ ಅಂದರೆ ಬ್ಲಾಗ್ ನಡೆಸುವ ಕ್ರಿಯೆ. ಬ್ಲಾಗರ್ ಎಂದರೆ ಬ್ಲಾಗ್ ಬರೆಯುವ ವ್ಯಕ್ತಿ.

ರೈತರ ಆತ್ಮಹತ್ಯೆ ತಡೆಗೆ ಉಪಾಯ: ಗೋ ಆಧಾರಿತ ಕೃಷಿ

ಕಗ್ಗಲಿಪುರ ಗೋಲೋಕದಲ್ಲಿ ರೈತ ಸಮಾವೇಶ

ಬೆಂಗಳೂರು, ಫೆ, ೧೭, ೨೦೦೮: ಗೋ ಆಧಾರಿತ ಸ್ವಾವಲಂಬಿ ಕೃಷಿಯಿಂದ ಮಾತ್ರ ರೈತರ ಆತ್ಮಹತ್ಯೆಗಳನ್ನು ನಿಲ್ಲಿಸಬಹುದು. ಆದುದರಿಂದ ಸರ್ಕಾರಗಳು ಗೋ ಆಧಾರಿತ ಕೃಷಿಗೆ ಬೆಂಬಲವಾಗಿ ನಿಲ್ಲಬೇಕು ಎಂದು ರಾಜ್ಯ ಪ್ರಶಸ್ತಿ ವಿಜೇತ ಗೋ ಆಧಾರಿತ ಕೃಷಿಕ ರಮೇಶರಾಜು ಅವರು ಇಲ್ಲಿ ಆಗ್ರಹಿಸಿದರು.