ಕರ್ನಾಟಕ ಸರಕಾರದ ನೀತಿಯೇನೆಂದರೆ ಜಗತ್ತೆಲ್ಲ ಮುಂದೆ ಮುಂದೆ ಸಾಗುತ್ತಿರಲಿ, ನಾನೊಬ್ಬ ಮಾತ್ರ ಹಿಂದೆ ಹಿಂದೆ
Vishva Kannada
- ಪ್ರಕಾಶ ಹೆಬ್ಬಾರ
ನಾಗೇಶ ಹೆಗಡೆ ಎಂದೊಡನೆ ಯಾವುದರಿಂದ ಅವರನ್ನು ಗುರುತಿಸಬೇಕು? ಅವರನ್ನು ನಿಕಟವಾಗಿ ಬಲ್ಲ ಎಲ್ಲರಿಗೂ ಒಂದಲ್ಲ ಒಂದು ಸಂದರ್ಭದಲ್ಲಿ ಈ ತಬ್ಬಿಬ್ಬು ಆಗುತ್ತದೆ. ಮನುಷ್ಯನ ಎಲ್ಲ ಅಂಗಾಂಗಗಳೂ ಪ್ರಮಾಣಬದ್ಧವಾಗಿದ್ದು ಒಂದಕ್ಕೊಂದು ಪೂರಕವಾಗಿ ಕ್ರಿಯಾಶೀಲವಾಗಿರುವಂತೆ ಹೆಗಡೆಯವರ ಸಾಧನೆಯ ನೆಲೆ ಕೂಡ. ಅವರನ್ನು ಅವರವರ ಅಳವಿಗೆ ತಕ್ಕಂತೆ ಭೂವಿಜ್ಞಾನಿ, ಪತ್ರಕರ್ತ, ನುಡಿಚಿತ್ರಕಾರ, ಪರಿಸರವಾದಿ, ಪತ್ರಕರ್ತರ ವೃತ್ತಿಬದುಕನ್ನು ರೂಪಿಸುವಾತ, ಸಂಪಾದಕ, ವಿಜ್ಞಾನ ಸಂವಹನಕಾರ- ಏನೆಲ್ಲಾ ಅನ್ನಬಹುದು. ರೈತರನ್ನು ಪ್ರಗತಿಪರರನ್ನಾಗಿ ಮಾಡಲು ಹೊರಟ, ಸದ್ದಿಲ್ಲದ ಕೃಷಿಕ ಎಂದರೂ ಒಪ್ಪೀತು. ವಾಮನ ತ್ರಿವಿಕ್ರಮನಾಗಿ ಬೆಳೆದು, ಎಷ್ಟು ತಿಣುಕಿದರೂ ಸಮಕಾಲೀನರ ವಿಮರ್ಶೆಗೆ ಸಿಕ್ಕದ ಗಟ್ಟಿ ವ್ಯಕ್ತಿತ್ವ. ನೀವು ಅವರನ್ನು ವೃತ್ತಿಪರ ಛಾಯಾಗ್ರಾಹಕ ಎಂದು ಕರೆದರೆ ಅದಕ್ಕೂ ನ್ಯಾಯ ಒದಗೀತು. ಅವರು ತೆಗೆದ ಕಪ್ಪುಬಿಳುಪಿನ ಚಿತ್ರಗಳನ್ನು ದಿನವಿಡೀ ನೋಡುತ್ತಾ ಹೋದರೂ ಅದೊಂದು ಹೊಸ ಅನುಭವವೇ.
- ಡಾ. ಯು. ಬಿ. ಪವನಜ
ಇತ್ತೀಚೆಗಿನ ದಿನಗಳಲ್ಲಿ ತುಂಬ ಕೇಳಿಬರುತ್ತಿರುವ ಪದ “ಬ್ಲಾಗ್”. ಅದರ ಹಲವು ಪ್ರತ್ಯಯಗಳೇ ಬ್ಲಾಗಿಂಗ್, ಬ್ಲಾಗರ್, ಇತ್ಯಾದಿ. ಈ ಬ್ಲಾಗ್ ಎಂದರೆ ಏನು? ಬ್ಲಾಗ್ ಎಂದರೆ ಒಂದು ರೀತಿಯಲ್ಲಿ ಸಾರ್ವಜನಿಕ ಸ್ವಗತ ಎನ್ನಬಹುದು. ಎಲ್ಲರಿಗೂ ಓದಲು ಅನುಕೂಲವಾಗುವಂತೆ ಅಂತರಜಾಲದಲ್ಲಿ (ಇಂಟರ್ನೆಟ್ನಲ್ಲಿ) ಇಟ್ಟಂತಹ ತೆರೆದ ದಿನಚರಿ ಅಥವಾ ಡೈರಿ ಎಂದೂ ಕರೆಯಬಹುದು. ಬ್ಲಾಗ್ನ ಕ್ರಿಯಾರೂಪವೇ ಬ್ಲಾಗಿಂಗ್ ಅಂದರೆ ಬ್ಲಾಗ್ ನಡೆಸುವ ಕ್ರಿಯೆ. ಬ್ಲಾಗರ್ ಎಂದರೆ ಬ್ಲಾಗ್ ಬರೆಯುವ ವ್ಯಕ್ತಿ.
ಕನ್ನಡ ಭಾಷೆಯಲ್ಲಿ ಬ್ಲಾಗಿಸುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಇದು ನಿಜಕ್ಕೂ ಸಂತಸದ ಸುದ್ದಿ. ಈ ಎಲ್ಲ ಬ್ಲಾಗೋತ್ತಮರುಗಳು ಎಂದಾದರೂ ಮುಖಾಮುಖಿ ಭೇಟಿಯಾದುದು ಇದೆಯೇ? ಬಹುಶಃ ಇಲ್ಲ. ಕೆಲವು ಮಂದಿ ಅಲ್ಲಿ ಇಲ್ಲಿ ಭೇಟಿಯಾಗಿರಬಹುದು. ಆದರೆ ಬ್ಲಾಗಿಗಳೇ ಪ್ರತ್ಯೇಕವಾಗಿ ಸಭೆ ಸೇರಿದ್ದು ಇಲ್ಲ. ಭಾರತೀಯ ಬ್ಲಾಗಿಗಳ ಸಭೆ ಹಲವು ಬಾರಿ ಬೇರೆ ಬೇರೆ ನಗರಗಳಲ್ಲಿ ಜರುಗಿವೆ. ಆದರೆ ಕನ್ನಡ ಬ್ಲಾಗಿಗಳ ಸಭೆ ಇದುವರೆಗೆ ಜರುಗಿಲ್ಲ.
INDINA NAMMA KARANATAKA JANRA BDUKIN PRISITITI HEGIDE?
MATTHU MUDIN DIN?
ಕಗ್ಗಲಿಪುರ ಗೋಲೋಕದಲ್ಲಿ ರೈತ ಸಮಾವೇಶ
ಬೆಂಗಳೂರು, ಫೆ, ೧೭, ೨೦೦೮: ಗೋ ಆಧಾರಿತ ಸ್ವಾವಲಂಬಿ ಕೃಷಿಯಿಂದ ಮಾತ್ರ ರೈತರ ಆತ್ಮಹತ್ಯೆಗಳನ್ನು ನಿಲ್ಲಿಸಬಹುದು. ಆದುದರಿಂದ ಸರ್ಕಾರಗಳು ಗೋ ಆಧಾರಿತ ಕೃಷಿಗೆ ಬೆಂಬಲವಾಗಿ ನಿಲ್ಲಬೇಕು ಎಂದು ರಾಜ್ಯ ಪ್ರಶಸ್ತಿ ವಿಜೇತ ಗೋ ಆಧಾರಿತ ಕೃಷಿಕ ರಮೇಶರಾಜು ಅವರು ಇಲ್ಲಿ ಆಗ್ರಹಿಸಿದರು.
ಬೆಂಗಳೂರು, ಜನವರಿ ೨೭, ೨೦೦೮: ಬೆಂಗಳೂರಿನ ದಕ್ಷಿಣಕ್ಕೆ ಕನಕಪುರ ರಸ್ತೆಗೆ ಹೊಂದಿಕೊಂಡಿರುವ ಕಗ್ಗಲಿಪುರದಲ್ಲಿರುವ ಅಮೃತಧಾರಾ ಗೋಶಾಲೆಯ ಆವರಣದಲ್ಲಿ ಫೆಬ್ರವರಿ ೧೭ರಂದು ಸಮರ್ಪಣ - ೨೦೦೮ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಪ್ರಧಾನವಾಗಿ ರೈತರ ಸಮಾವೇಶ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿರುತ್ತವೆ. ಪೂರ್ವಾಹ್ನ ೧೧ ಘಂಟೆಗೆ ರೈತರ ಸಮಾವೇಶವಿರುತ್ತದೆ. ಕನಕಪುರ ತಾಲೂಕಿನ ರೈತರ ಸಮಾವೇಶದಲ್ಲಿ “ಗೋಸಂರಕ್ಷಣೆಯ ಅಗತ್ಯ”, “ಗೋವು ಮತ್ತು ಆರ್ಥಿಕತೆ” ಈ ವಿಷಯಗಳ ಬಗ್ಗೆ ಉಪನ್ಯಾಸ ಮತ್ತು ಚರ್ಚೆಗಳಿರುತ್ತವೆ. ಅಪರಾಹ್ನದ ಕಾರ್ಯಕ್ರಮಗಳಲ್ಲಿ ಗೋವಿಗಾಗಿ ಸದ್ದಿಲ್ಲದೆ ದುಡಿಯುತ್ತಿರುವ ಎಲೆಮರೆಯ ಕಾಯಿಗಳಿಗೆ ಸೇವಾಪುರಸ್ಕಾರ ನೀಡಲಾಗುತ್ತದೆ. ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಯವರ ಅಶೀರ್ವಚನದ ನಂತರ ಸಾಂಸ್ಕೃತಿಕ ಕಾರ್ಯಕ್ರಮವಿರುತ್ತವೆ. ಕದ್ರಿ ಗೋಪಾಲನಾಥರ ಶಿಷ್ಯ ಶ್ರೀಧರ ಸಾಗರ ಅವರಿಂದ ಸ್ಯಾಕ್ಸಾಫೋನ್ ವಾದನ, ರವಿಚಂದ್ರ ಮತ್ತು ತಂಡದವರಿಂದ ಕೊಳಲು ಪ್ರಧಾನವಾಗಿರುವ ವಾದ್ಯವೃಂದ ರೂಪಕ ಹಾಗೂ ಹೊಸನಗರದ ಶ್ರೀರಾಮಚಂದ್ರಾಪುರ ಮಠದ ತಂಡದವರಿಂದ ನೃತ್ಯ ರೂಪಕವಿರುತ್ತದೆ. ಕೊನೆಯಲ್ಲಿ ಗೋವುಗಳಿಗೆ ನೀರಾಜನ ಮತ್ತು ದೀಪೋತ್ಸವ ಕಾರ್ಯಕ್ರಮಗಳಿರುತ್ತವೆ. ಸಮಸ್ತರು ಈ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಕೋರಲಾಗಿದೆ. ಇಡೀ ದಿನ ಗವ್ಯ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಹಾಗೂ ಗವ್ಯ ಚಿಕಿತ್ಸೆಯ ವ್ಯವಸ್ಥೆ ಇರುತ್ತದೆ.
Q: Is it possible to transliterate from Kannada into Hindi? I have the data in Microsoft Word 2003 doc file.
A: Surprisingly the answer is YES. Many people are not aware of this little feature built into Microsoft Word 2003. The steps are like this -
