ಈ ಸಲದ ರಾಜ್ಯೋತ್ಸವ ಪ್ರಶಸ್ತಿಗೆ ಒಂದು ವೈಶಿಷ್ಟ್ಯವಿದೆ. ಸರಕಾರವಿಲ್ಲದೆ ಯಾವುದೇ ರಾಜಕಾರಣಿಯ ವಶೀಲಿಯಿಲ್ಲದೆ ನೀಡಿದ ಪ್ರಶಸ್ತಿಯಿದು. ಈ ಸಲದ ಪ್ರಶಸ್ತಿಗೆ ಅರ್ಹರನ್ನು ಆಯ್ಕೆ ಮಾಡಿದ್ದು ರಾಷ್ಟ್ರಕವಿ ಡಾ. ಜಿ.ಎಸ್. ಶಿವರುದ್ರಪ್ಪನವರು. ಹೀಗಾಗಿ ಈ ಸಲದ ಪ್ರಶಸ್ತಿಗೆ ಭಾಜನರಾದವರ ಹೆಸರುಗಳಿಗೆ ಯಾವುದೇ ಕಳಂಕವಿಲ್ಲ.
Vishva Kannada
Q: I tyied to copy a opentype font into the windows mobile, and it can not show the characters corrently. Is there any solution such as "ups10.dll", a special dll for windows mobile?
A: The answer is big NO. Just by copying the opentype font into the device will make to display the text shown without the proper rendering (glyph substitution, glyph positioning etc. are not done). WinCE 5.0 itself has introduced the fecility to have internationalization including the rendering of opentype fonts. I had built a mobile device platform using the WinCE 5.0 SDK long ago. I also developed a multilingual notepad -English, Hindi and Kannada - employing Visual Studio .NET Compact Framework, way back in 2004 itself. But none of the devices available in the market allow me to replace their OS by the one built by me. They neither include the components required for rendering the opentype font also. I have sent emails to HTC, the largest manufacturer of Windows Mobile devices requesting them to include these compnents. My email was not replied at all. I have repeatedly requested Microsoft India to take up the issue with device manufacturers like HP, HTC, etc. They also did not bother. This is the situation.
- ಡಾ. ಯು. ಬಿ. ಪವನಜ
ಮೈಕ್ರೋಸಾಫ್ಟ್ ಕಂಪೆನಿ ತಂತ್ರಾಂಶ (ಸಾಫ್ಟ್ವೇರ್) ತಯಾರಿಕೆಗೆ ಜಗತ್ಪ್ರಸಿದ್ಧ. ಅವರು ಕೆಲವು ಯಂತ್ರಾಂಶಗಳನ್ನೂ (ಹಾರ್ಡ್ವೇರ್) ತಯಾರಿಸುತ್ತಾರೆ. ಅವುಗಳಲ್ಲಿ ಮೌಸ್ಗಳು ಹೆಚ್ಚು ಜನಪ್ರಿಯ. ಮೈಕ್ರೋಸಾಫ್ಟ್ ಮೌಸ್ಗಳ ಪಟ್ಟಿಗೆ ಇತ್ತೀಚೆಗೆ ಆದ ಸೇರ್ಪಡೆ ವೈರ್ಲೆಸ್ ನೋಟ್ಬುಕ್ ಲೇಸರ್ ಮೌಸ್8000. ಇದು ಕೇವಲ ಮೌಸ್ ಅಲ್ಲ. ಇದನ್ನು ಬಳಸಿ ಪವರ್ಪಾಯಿಂಟ್ ಪ್ರೆಸೆಂಟೇಶನ್ಗಳ ದೂರನಿಯಂತ್ರಣ ಮಾಡಬಹುದು. ಅಷ್ಟು ಮಾತ್ರವಲ್ಲ ವಿಂಡೋಸ್ ಮೀಡಿಯಾ ಪ್ಲೇಯರನ್ನು ಕೂಡ ನಿಯಂತ್ರಿಸಬಹುದು.
- ಡಾ. ಯು. ಬಿ. ಪವನಜ
ಮೊಬೈಲ್ ಫೋನುಗಳಲ್ಲಿ ಮೇಲ್ದರ್ಜೆಯವುಗಳಲ್ಲಿ ಅಂತರಜಾಲ ಸಂಪರ್ಕ, ವಿ-ಅಂಚೆ ಇತ್ಯಾದಿ ಸೌಕರ್ಯಗಳಿರುತ್ತವೆ. ಇಂತಹ ಫೋನುಗಳಲ್ಲಿ ವಿಂಡೋಸ್ ಕಾರ್ಯಾಚರಣ ವ್ಯವಸ್ಥೆಯನ್ನು ಹೊಂದಿರುವ ಫೋನುಗಳು ಇತ್ತೀಚೆಗಿನ ದಿನಗಳಲ್ಲಿ ಜನಪ್ರಿಯವಾಗುತ್ತಿವೆ. ಅಂತರಜಾಲದಲ್ಲಿ ಇಂತಹ ಫೋನುಗಳಿಗೆ ಹಲವಾರು ಉಚಿತ ತಂತ್ರಾಂಶಗಳು ಲಭ್ಯವಾಗಿರುವುದು ಮತ್ತು ತಂತ್ರಾಂಶ ಪರಿಣತರಾಗಿದ್ದಲ್ಲಿ ತಾವೇ ಈ ಫೋನುಗಳಿಗೆ ತಂತ್ರಾಂಶ ತಯಾರಿಸುವ ಸವಲತ್ತುಗಳಿರುವುದೂ ಈ ಫೋನುಗಳು ಜನಪ್ರಿಯವಾಗುತ್ತಿರುವುದಕ್ಕೆ ಕಾರಣಗಳು. ಇಂತಹ ಫೋನುಗಳು ಹಲವು ಕಂಪೆನಿಗಳ ಹೆಸರಿನಲ್ಲಿ ಲಭ್ಯವಿವೆ. ಅವುಗಳೆಂದರೆ O2, iMate, HTC ಇತ್ಯಾದಿ. ಈ ಎಲ್ಲ ಹೆಸರುಗಳಲ್ಲಿ ಅವು ಲಭ್ಯವಿದ್ದರೂ ಈ ಎಲ್ಲ ಫೋನುಗಳನ್ನು ತಯಾರಿಸುವ ಕಂಪೆನಿ ಒಂದೇ -ಅದುವೇ ಎಚ್ಟಿಸಿ. ಮೊದಲು ಎಚ್ಟಿಸಿ ಕಂಪೆನಿ ಇತರರಿಗೆ ಮಾತ್ರ ಈ ಫೋನುಗಳನ್ನು ತಯಾರಿಸುತ್ತಿತ್ತು. ಇತ್ತೀಚೆಗಷ್ಟೆ ಅದು ತನ್ನ ಹೆಸರಿನಲ್ಲೆ ಇವುಗಳನ್ನು ತಯಾರಿಸಿ ಮಾರುಕಟ್ಟೆಗೆ ಬಿಟ್ಟಿದೆ. ಅವುಗಳಲ್ಲಿ ನಮ್ಮ ದೇಶದಲ್ಲಿ ಲಭ್ಯವಿರುವ ಮತ್ತು ತುಂಬ ಸುದ್ದಿ ಮಾಡುತ್ತಿರುವ ಫೋನು ಎಚ್ಟಿಸಿ ಟಚ್. ಏನಿದೆ ಇದರಲ್ಲಿ?
-ಡಾ. ಯು. ಬಿ. ಪವನಜ
ಕೆಲವು ಕಂಪೆನಿಗಳಿವೆ ಏನು ಮಾಡಿದರೂ ಸುದ್ದಿಯಾಗುತ್ತದೆ. ಈ ಪಟ್ಟಿಯಲ್ಲಿ ಆಪಲ್ ಕಂಪೆನಿಯ ಹೆಸರೂ ಸೇರಿದೆ. ಆಪಲ್ ಕಂಪೆನಿ ಒಂದು ಕಾಲದಲ್ಲಿ ವೈಯಕ್ತಿಕ ಗಣಕಗಳು (ಪರ್ಸನಲ್ ಕಂಪ್ಯೂಟರ್) ಮನೆಮಾತಾಗುವಂತೆ ಮಾಡಿದ ಕಂಪೆನಿ. ಐಬಿಎಂ ಮತ್ತು ಮೈಕ್ರೋಸಾಫ್ಟ್ನವರ ಹೊಡೆತದಿಂದಾಗಿ ತತ್ತರಿಸಿ, ಇನ್ನೇನು ಬಾಗಿಲು ಹಾಕಬೇಕೆಂದುಕೊಂಡಿದ್ದಾಗ ಐಪ್ಯಾಡ್ ಮೂಲಕ ಮತ್ತೆ ಚೇತರಿಸಿಕೊಂಡಿತು. ಎಂಪಿ-3 ಪ್ಲೇಯರ್ಗಳ ಲೋಕದಲ್ಲಿ ಐಪ್ಯಾಡ್ ತುಂಬ ಖ್ಯಾತಿಯನ್ನು ಹೊಂದಿದೆ. ಈ ಖ್ಯಾತಿಯನ್ನೇ ಬಂಡವಾಳವನ್ನಾಗಿಸಿಕೊಂಡು ಆಪಲ್ ಕಂಪೆನಿ ಇತ್ತೀಚೆಗೆ ಐಫೋನ್ ಎಂಬ ಹೆಸರಿನ ಮೊಬೈಲ್ ಫೋನ್ ತಯಾರಿಸಿ ಅಮೆರಿಕಾದಲ್ಲಿ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ.
- ಡಾ. ಯು. ಬಿ. ಪವನಜ
ಮೈಕ್ರೋಸಾಫ್ಟ್ ಕಂಪೆನಿ ತಂತ್ರಾಂಶ (ಸಾಫ್ಟ್ವೇರ್) ತಯಾರಿಕೆಗೆ ಜಗತ್ಪ್ರಸಿದ್ಧ. ಅವರು ಕೆಲವು ಯಂತ್ರಾಂಶಗಳನ್ನೂ (ಹಾರ್ಡ್ವೇರ್) ತಯಾರಿಸುತ್ತಾರೆ ಎನ್ನುವ ವಿಷಯ ಅಷ್ಟು ಪ್ರಚಾರ ಪಡೆದಿಲ್ಲ. ಮೈಕ್ರೋಸಾಫ್ಟ್ ಕಂಪೆನಿ ಮೌಸ್ ಮತ್ತು ಕೀಬೋರ್ಡ್ಗಳನ್ನು ಹಲವು ವರ್ಷಗಳಿಂದ ತಯಾರಿಸುತ್ತಿದೆ. ಅವುಗಳ ಪಟ್ಟಿಗೆ ಇತ್ತೀಚೆಗೆ ಸೇರ್ಪಡೆಯಾಗಿರುವುದು ಝೂನ್ (Zune). ಇದನ್ನು ಆಪಲ್ ಕಂಪೆನಿಯ ತುಂಬ ಖ್ಯಾತವಾಗಿರುವ ಐಪಾಡ್ಗೆ ಪ್ರತಿಸ್ಪರ್ಧಿಯಾಗಿ ತಯಾರಿಸಲಾಗಿದೆ. ಆಪಲ್ ಐಪಾಡ್ ಮತ್ತು ಮೈಕ್ರೋಸಾಫ್ಟ್ ಝೂನ್ ಎರಡೂ ಸಂಗೀತ ಮತ್ತು ಚಲನಚಿತ್ರಗಳನ್ನು ಸಂಗ್ರಹಿಸಿಟ್ಟು ಬೇಕಾದಾಗ ಪ್ಲೇ ಮಾಡುವ ಕಿಸೆಯಲ್ಲಿ ಹಿಡಿಸಬಹುದಾದ ಪುಟ್ಟ ಸಲಕರಣೆಗಳಾಗಿವೆ.
ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿಯವರು ಭಾರತೀಯ ಗೋತಳಿಗಳ ಸಂರಕ್ಷಣೆಗೆ ಕಂಕಣಬದ್ಧರಾಗಿ ದುಡಿಯುತ್ತಿರುವುದು ಎಲ್ಲರಿಗೂ ತಿಳಿದಿರಬಹುದು. ವಿದೇಶಿ ತಳಿಯ ಹಸುಗಳು ನಮ್ಮ ಹವಾಮಾನಕ್ಕೆ ಒಗ್ಗುವುದಿಲ್ಲ, ಅವುಗಳಿಗೆ ತುಂಬ ಔಷಧೋಪಚಾರ, ನಿಯಂತ್ರಿತ ಹವೆ ಎಲ್ಲ ಅಗತ್ಯ ಎಂಬುದಾಗಿ ನಾವೆಲ್ಲ ಕೇಳಿದ್ದೇವೆ. ಭಾರತೀಯ ಗೋತಳಿಗಳು ಇಲ್ಲಿಯ ಹವಾಮಾನಕ್ಕೆ ಒಗ್ಗಿದವು. ಅವುಗಳಿಗೆ ಈ ಉಪಚಾರಗಳ ಅಗತ್ಯವಿಲ್ಲ. ನಾವು ಚಿಕ್ಕವರಿದ್ದಾಗ ಭಾರತೀಯ ಹಸುಗಳ ಹಾಲನ್ನೇ ಕುಡಿದವರು. ಆಗ ಯಾವ ಹಸುವಿಗೂ ದೊಡ್ಡ ಖಾಯಿಲೆ ಬಾಧಿಸಿದ್ದು ನನಗೆ ನೆನಪಿಲ್ಲ. ಚಿಕ್ಕಪುಟ್ಟ ಖಾಯಿಲೆಗಳು ಬಾಧಿಸಿದರೂ ಹಳ್ಳಿ ಔಷಧಿಂದಲೇ ಅವು ಗುಣವಾಗುತ್ತಿದ್ದವು. ಈಗ ಎಲ್ಲರೂ ಸಾಕುತ್ತಿರುವ ವಿದೇಶೀ ಮೂಲದ ತಳಿಸಂಕರದಿಂದ ಹುಟ್ಟಿದ ಹಸುಗಳಿಗೆ ದೊಡ್ಡ ದೊಡ್ಡ ಖಾಯಿಲೆಗಳೇ ಬಾಧಿಸುತ್ತವೆ. ಅವಕ್ಕೆ ನೀಡಬೇಕಾದ ಔಷಧಿಗೂ ಸಾವಿರಾರು ರೂಪಾಯಿ ನೀಡಬೇಕಾಗುತ್ತದೆ. ಇದೆಲ್ಲ ಯಾಕೆ ಹೇಳಿದ್ದೆಂದರೆ ಒಂದು ಉದಾಹರಣೆ ನನ್ನಲ್ಲೇ ಇದೆ.
ಕೃಷಿನೀತಿ ತಜ್ಞ ದೇವಿಂದರ್ ಶರ್ಮಾ ಅವರು ಈಚೆಗೆ ಬೆಂಗಳೂರಿನಲ್ಲಿ ನೀಡಿದ ಉಪನ್ಯಾಸದ ಆಯ್ದ ಭಾಗಗಳು.
-ಪ್ರೊ. ದೇವೀಂದ್ರ ಶರ್ಮಾ
ಲಿಪಿಕಾರ: ನಾಗೇಶ ಹೆಗಡೆ
ದೇಶದ ಹೆಸರಾಂತ ಕೃಷಿ ಚಿಂತಕ ಪ್ರೊ. ದೇವೀಂದ್ರ ಶರ್ಮಾ ಈಚೆಗೆ ಬೆಂಗಳೂರಿನ ಕೃಷಿ ಎಂಜಿನಿಯರ್ಗಳ ಸಂಸ್ಥೆಯಲ್ಲಿ ಹೇಳಿದ ಮಾತುಗಳನ್ನು ಇಲ್ಲಿ ಕೊಡಲಾಗುತ್ತಿದೆ. ಇದು ಶಬ್ದಶಃ ತರ್ಜುಮೆಯಲ್ಲ. ಅವರ ಭಾಷಣದ ಸಂದರ್ಭದಲ್ಲಿ ಬರೆದಿಟ್ಟುಕೊಂಡ ಟಿಪ್ಪಣಿಯನ್ನು ಆಧರಿಸಿ ಅಂಕಿ ಅಂಶ ಕುರಿತು ಸಂಶಯ ಎದ್ದಾಗ ಶರ್ಮಾರ ಪ್ರಕಟಿತ ಲೇಖನಗಳನ್ನು ರೆಫರ್ ಮಾಡಿ (ಉದಾ: www.countercurrents.org/glo-crop.htm) ಸಿದ್ಧಪಡಿಸಿದ ಕನ್ನಡ ಲೇಖನ ಇದು. ಪಾಶ್ಚಾತ್ಯ ತಜ್ಞರು ಹೇಳಿದ್ದೇ ವೇದವಾಕ್ಯ ಎಂಬಂತೆ ನಮ್ಮ ತಜ್ಞರು ನಮಗೆ ಅದನ್ನೇ ಬೋಧಿಸುತ್ತ ನಮ್ಮ ರೈತರ ಹಿತವನ್ನು ಹೇಗೆ ಬಲಿಗೊಡುತ್ತಿದ್ದಾರೆ ಎಂಬ ವಿಚಾರ ಈ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದ ಚಿಂತನೆಗೆ ಸೂಕ್ತವಾದೀತು.
