Press "Enter" to skip to content

Vishva Kannada

ಕನ್ನಡ ಸಂಸ್ಕೃತಿ – ನಮ್ಮ ಹೆಮ್ಮೆ – ಭಾಗ – ೨

- ಡಾ| ಎಂ ಚಿದಾನಂದ ಮೂರ್ತಿ

ಸ್ವಾಭಿಮಾನ

ಕನ್ನಡ ಸಂಸ್ಕೃತಿಯ ತಿರುಳನ್ನು ಒಂದೆರಡು ಮಾತುಗಳಲ್ಲಿ ವಿವರಿಸಿ ಎಂದು ಯಾರಾದರೂ ಕೇಳಿದರೆ ಅವರಿಗೆ ನಾನು ಕೊಡುವ ಉತ್ತರ: ``ಸ್ವಾಭಿಮಾನ ಮತ್ತು ಸಮನ್ವಯ". ಸ್ವಾಭಿಮಾನವೆಂದರೆ ತನ್ನ ಬಗ್ಗೆ ಮತ್ತು ತನ್ನತನದ ಬಗ್ಗೆ ಇರುವ ಪೂರ್ಣ ಅರಿವು ಮತ್ತು ವಿಶ್ವಾಸ. ಸ್ವಾಭಿಮಾನವೆಂದರೆ ಅಹಂಕಾರವಲ್ಲ. ಅಹಂಕಾರವು ಬಹುತೇಕ ಸ್ವಾರ್ಥಪರವೂ ಇತರ ಯಾರನ್ನೇ ಗುರುತಿಸದೆ ತನ್ನನ್ನು ಮಾತ್ರ ಎತ್ತಿ ಹಿಡಿದುಕೊಳ್ಳುವ ಸ್ವಪ್ರೇಮವೂ ಆಗಿದ್ದು ಟೊಳ್ಳುತನವನ್ನು ಬೆಳೆಸಿಕೊಂಡಿರುವ ಸ್ವಪ್ರತಿಷ್ಠೆಯ ಪ್ರತೀಕ. ಸ್ವಾಭಿಮಾನಿಯು ಬೆಳೆದ ಮತ್ತು ಬೆಳೆಯುವ ವ್ಯಕ್ತಿಯಾದುದರಿಂದ ಅವನು ಇತರ ವ್ಯಕ್ತಿ ಅಥವಾ ವ್ಯಕ್ತಿಗಳ ದೊಡ್ಡತನವನ್ನು ಗುರುತಿಸಲು ಸಿದ್ಧನಿರುತ್ತಾನೆ. ಸ್ವಾಭಿಮಾನವೆನ್ನುವುದು ಎರಡು ಮುಖಗಳ ನಾಣ್ಯವಿದ್ದಂತೆ - ನಾನು ಇನ್ನೊಬ್ಬನಿಗಿಂತ ಕಡಿಮೆ ಅಲ್ಲವೆಂಬ ನಂಬಿಕೆ ಇರುವಂತೆಯೇ ಇತರರೂ ತನಗಿಂತ ಕಡಮೆ ಇರಲಾರರು ಎಂಬ ನಂಬಿಕೆಯು ಅವನಿಗಿರುತ್ತದೆ. ಅವನು ಎಂದೂ ಇನ್ನೊಬ್ಬರ ನೆರಳಾಗಿರಲು ಬಯಸದೆ ತನ್ನ ವಿಶಿಷ್ಟ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಲು ಯತ್ನಿಸುತ್ತಾನೆ. ಯಾವುದೇ ಕ್ಷೇತ್ರದಲ್ಲಾಗಲಿ ಅಂತಹ ಸ್ವಾಭಿಮಾನಿಗಳಿಂದ ಮಾತ್ರವೇ ಮೌಲಿಕ ಕಾರ್ಯಗಳು ನಡೆಯುತ್ತವೆ.

ಎ ಹಿಸ್ಟಾರಿಕಲ್ ಅಟ್ಲಾಸ್ ಆಫ್ ಕರ್ನಾಟಕ

- ಸ್ವರೂಪ ಭೂಷಣ

ನಮ್ಮ ನಾಡಿನ ಸಾಂಪ್ರದಾಯಕ ಹೆಸರಾದ "ಕರ್ನಾಟಕ" ಎಲ್ಲಿಂದ ಬಂತು? ಕಪ್ಪು ವರ್ಣದ ಮಣ್ಣಿನ ಸಂಕೇತವಾಗಿ ಬಂದ ಬಿರುದೇ ಇದು? ಅಥವ ಅತಿ ಎತ್ತರವಿರುವ ನಮ್ಮ ಭೂಮಾತೆ, ಕರುನಾಡು ಎಂದು ಕರೆಯಲ್ಪಟ್ಟಿತೆ? ಕರ್ನಾಟಕ ಹಾಗು ಕನ್ನಡಿಗರ ನಿಜ ಸ್ವರೂಪವು ಅವರ ಹಿನ್ನೆಲೆಯಲ್ಲಿಯೇ ಅಡಗಿದೆ. ಈ ಹಿನ್ನೆಲೆಯನ್ನು ಸಚಿತ್ರವಾಗಿ "ಕರ್ನಾಟಕದ ಐತಿಹಾಸಿಕ ಭೂಪಟ ಗ್ರಂಥ" ಯಲ್ಲಿ ಪ್ರಸ್ತುತಿಸಲ್ಪಟ್ಟಿದೆ. ಆಂಗ್ಲ ಭಾಷೆಯಲ್ಲಿರುವ ಈ ಪುಸ್ತಕದ ಹೆಸರು "ಎ ಹಿಸ್ಟಾರಿಕಲ್ ಅಟ್ಲಾಸ್ ಆಫ್ ಕರ್ನಾಟಕ" ಎಂದು.

ಕನ್ನಡ ಸಂಸ್ಕೃತಿ – ನಮ್ಮ ಹೆಮ್ಮೆ – ಭಾಗ – ೧

- ಡಾ| ಎಂ. ಚಿದಾನಂದ ಮೂರ್ತಿ

ಕೆಲವರಿಗೆ ಕರ್ನಾಟಕವನ್ನು ಪ್ರೀತಿಸುವುದು ಸಂಕುಚಿತ ದೃಷ್ಟಿಯೆನ್ನಿಸುತ್ತದೆ. ಅವರಿಗೆ ಭಾರತ ಮಾತ್ರ ಮುಖ್ಯ ; ರಾಷ್ಟ್ರಪ್ರೇಮವೊಂದೇ ದೇಶಪ್ರೇಮ. ಕರ್ನಾಟಕ ಪ್ರೇಮ ಎಂಬ ಮಾತು ಅವರಿಗೆ ಅರ್ಥಹೀನ. ಕನ್ನಡ ನಾಡು, ಕನ್ನಡ ನುಡಿಗಳನ್ನು ಕೊಂಡಾಡುವುದು ಅವರಿಗೆ ರಾಷ್ಟ್ರದ್ರೋಹವಾಗಿಯೂ ಕಂಡಿದೆ. ಭಾರತೀಯ ಸಂಸ್ಕೃತಿಯೊಂದು ಇರುವಂತೆ ಕರ್ನಾಟಕ ಸಂಸ್ಕೃತಿಯೆಂಬುದೊಂದು ಅವರ ಪಾಲಿಗೆ ಇಲ್ಲ. ಇದು ಸರಿಯೋ? ವಿಚಾರ ಮಾಡೋಣ.

ಶಾಕಾಹಾರಿಯೋ ಶಾಖಾಹಾರಿಯೋ?

- ಯು. ಬಿ. ಪವನಜ

೧೯೯೫ರಲ್ಲಿ ನಾನು ತೈವಾನಿಗೆ ಉನ್ನತ ಸಂಶೋಧನೆ ಮಾಡಲು ಹೋಗಿದ್ದೆ. ಅಲ್ಲಿಗೆ ತಲುಪಿದ ದಿನ ರಾತ್ರಿ ನಮ್ಮ ಸಂಶೋಧನಾಲಯದ ಸಹೋದ್ಯೋಗಿಗಳಿಂದ ನನಗೆ ಒಂದು ಸ್ವಾಗತ ಭೋಜನಕೂಟ ಇತ್ತು. ತೈವಾನಿನಲ್ಲಿ ಊಟ ಕಷ್ಟವಾಗಬಹುದು ಎಂದು ಮೊದಲೇ ಊಹಿಸಿಕೊಂಡಿದ್ದೆ. ಈ ಸ್ವಾಗತ ಕೂಟದಲ್ಲಿ ಏನು ತಿನ್ನಿಸುತ್ತಾರೊ ಎಂದು ಭಯಪಟ್ಟುಕೊಂಡೇ ಸಹೋದ್ಯೋಗಿಗಳ ಜೊತೆ ಹೋದೆ. ಎಲ್ಲರೂ ಒಂದು ಮೇಜಿನ ಸುತ್ತ ಕೂತೆವು. ಪರಿಚಾರಕರು ಪರಿಚಾರಿಕೆಯರು ಬಂದರು. ನಾನು ಶುದ್ಧ ಶಾಕಾಹಾರಿ ಎಂದು ಘೋಷಿಸಿದೆ. ನಮ್ಮ ಸಹೋದ್ಯೋಗಿಗಳು ನಿಮ್ಮಲ್ಲಿ ಶಾಕಾಹಾರ ಏನೇನು ಇದೆ ಎಂದು ಕೇಳಿದರು. ಅವರು ಹೇಳಿದ್ದು ನನಗೆ ಏನೇನೂ ಅರ್ಥವಾಗಲಿಲ್ಲ. ರೈಸ್ (ಆನ್ನ) ಎಂಬ ಪದ ಉಚ್ಚರಿಸಿದೆ. ಅವರು ಅದು ಇದೆ ಎಂದರು. ಸರಿ ಅದನ್ನೇ ತನ್ನಿ ಎಂದೆ.

ಕನ್ನಡ ಪತ್ರಿಕೆಯಿಂದ ಇಂಗ್ಲೀಷಿ‌ನಲ್ಲಿ ಪತ್ರ

ನಾನು ಉಷಾಕಿರಣ ಪತ್ರಿಕೆಗೆ ಒಂದು ಲೇಖನ ಕೊಟ್ಟಿದ್ದೆ. ಅದರ ಶೀರ್ಷಿಕೆ "ಮಾಹಿತಿ ತಂತ್ರಜ್ಞಾನ ಮತ್ತು ಇಂಗ್ಲೀಷಿ‌ನ ಪಿತ್ತ". ಅದನ್ನು ವಿಶ್ವ ಕನ್ನಡದಲ್ಲೂ ಓದಬಹುದು. ಉಷಾಕಿರಣ ಪತ್ರಿಕೆಯವರು ಕನ್ನಡ ಮಾಧ್ಯಮ ಮತ್ತು ಇಂಗ್ಲೀಷ್ ಮಾದ್ಯಮ ಚರ್ಚೆ ಬಗ್ಗೆ ಹಲವರಿಂದ ಲೇಖನ ತರಿಸಿ ಪ್ರಕಟಿಸಿದ್ದರು. ಆ ಮಾಲೆಯಲ್ಲಿ ನನ್ನ ಲೇಖನವೂ ಪ್ರಕಟವಾಗಿತ್ತು. ಸರಿ. ಈಗೇನು ಅಂತೀರಾ? ಎಷ್ಟೋ ಸಮಯದ ನಂತರ ಪತ್ರಿಕೆಯಿಂದ ಸಂಭಾವನೆ ಬಂತು. ಅದರ ಜೊತೆ ಪತ್ರವೂ ಇತ್ತು. ಆದರೆ ಆ ಪತ್ರ ಇಂಗ್ಲೀಷ್ ಭಾಷೆಯಲ್ಲಿ ಇತ್ತು!

ಕೊರಳ್‌ಗೆ ಬೆರಳ್

- ಡಾ. ಯು. ಬಿ. ಪವನಜ


ಈಗ ಯುಎಸ್‌ಬಿ ಡ್ರೈವ್‌ಗಳ ಕಾಲ ಬಂದಿದೆ. ಗಣಕದ ಮಾಹಿತಿಗಳಿಗೆ ಒಂದು ಥಂಬ್ ಡ್ರೈವ್, ಹಾಡು ಕೇಳಲೊಂದು ಎಂಪಿ-೩ ಪ್ಲೇಯರ್, ಫೋಟೋ ತೆಗೆಯಲೊಂದು ಯುಎಸ್‌ಬಿ ಕ್ಯಾಮರಾಗಳನ್ನು ಕುತ್ತಿಗೆಯಲ್ಲಿ ಜೋತಾಡಿಸಿ ಅಲೆದಾಡುವ ಆಧುನಿಕ ಅಂಗುಲಿಮಾಲರನ್ನು ಬೀದಿಗಳಲ್ಲಿ ನೋಡುವ ಕಾಲ ದೂರವಿಲ್ಲ.

 

Indic LIPs for Windows XP

LIP means Language Interface Pack. There is a difference between the Multilingual User-Interface (MUI) and the LIP. In case of MUI all the strings are localized into the language. Whereas in case of LIP, only 20% of the UI (menu commands) elements which are used 80% of the time are translated. There is no MUI available for any Indian language. Instead LIPs are available for some languages. Once the LIP is installed, the UI will be in that language only. If you want English UI, then you will have to uninstall the LIP. It is not possible to toggle the UI language without re-booting as is the case in Office 2003 LIP.

ಒಂದು ಆರ್ಡಿನರಿ ಲವ್‌ಸ್ಟೋರಿ

- ಬೇಳೂರು ಸುದರ್ಶನ

ಸೀಟಿಲ್ವಾ ಎಂದು ಆವಳು ನನ್ನ ಕೇಳುವ ಹೊತ್ತಿಗಾಗಲೇ ನಾನು ಆ ಬಸ್ಸಿನ ಡ್ರೈವರ್ ಬಾಗಿಲಿನ ಮೂಲಕ ಒಳಗೆ ಬಂದು ಇಂಜಿನ್ ಬಳಿ ಇದ್ದ ಖಾಲಿ ಸೀಟಿನಲ್ಲಿ ಬ್ಯಾಗು ಬಿಸಾಕಿದ್ದೆ. ಬಳ್ಳಾರಿಯ ಆ ತಣ್ಣನೆ ರಾತ್ರಿಯಲ್ಲಿ ಜನ ಪುತುಪುತು ಬಸ್ಸಿನೊಳಗೆ ಹೊರಗೆ ಅಡ್ಡಾಡುತ್ತ ಗಾಳಿಯನ್ನು ಬಿಸಿ ಮಾಡುತ್ತಿದ್ದರು. ಇಲ್ಲಿ ಅವಳು ತನ್ನೊಳಗೇ ಏನೋ ಯೋಚಿಸುತ್ತ ವಿಮನಸ್ಕಳಾಗಿ ನಿಂತಿದ್ದಳು. ನಾನು ಅವಳ ಕೈ ಹಿಡಿದು ಒಳಗೆ ಎಳೆದುಕೊಂಡೆ. ಇಡೀ ದಿನ ಅತ್ತು ಅತ್ತು ಅವಳ ಕಣ್ಣುಗಳು ಊದಿಕೊಂಡಿದ್ದರೂ ಎಷ್ಟೆಲ್ಲ ಛಂದ ಇದ್ದಾಳಲ್ಲ ಎಂದೆನ್ನಿಸಿ ನನಗೆ ಅವಳನ್ನು ಅಲ್ಲೇ ಭುಜಕ್ಕೆ ಒರಗಿಸಿಕೊಳ್ಳಬೇಕು ಎನಿಸಿತು. ಆದರೆ ಕೊಳಕು ಕಾಡ್ರಾ ಧರಿಸಿ ಅಂಡಲೆಯುವ ನಾನು ಯಾರು, ಡಿಗ್ರಿ ಮುಗಿಸಿ ಇಲ್ಲಿ ಅವನನ್ನು ಪ್ರೀತಿಸುತ್ತ ಇರೋ ಅವಳೆಲ್ಲಿ .....

ಕನ್ನಡಕ್ಕೆ ತೆರಿಗೆ ರದ್ದು ಮಾಡುವಿರಾ?

ಹೊಸ ಮುಖ್ಯ ಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಹಣಕಾಸು ಮಂತ್ರಿಯವರಲ್ಲಿ ನನ್ನದೊಂದು ವಿನಂತಿ. ದಯವಿಟ್ಟು ಸ್ಥಳೀಯ ತಂತ್ರಾಂಶ (ಸಾಫ್ಟ್‌ವೇರ್) ಉತ್ಪನ್ನ ಮತ್ತು ಸೇವೆಗಳಿಗೆ ವಿಧಿಸಿರುವ ೧೨.೫% ಮಾರಾಟ ತೆರಿಗೆಯನ್ನು (VAT) ರದ್ದು ಮಾಡಿ. ಈ ತೆರಿಗೆಯಿಂದ ಸರಕಾರಕ್ಕೆ ಯಾವ ಲಾಭವೂ ಇಲ್ಲ. ಇದು ಕನ್ನಡಕ್ಕೆ ಮಾತ್ರ ದೊಡ್ಡ ಕಂಟಕಪ್ರಾಯವಾಗಿದೆ.

ಚಿನಕುರಳಿ – ೦೯

- ಮರ್ಕಟ

`ನಾನು ಪೆಪ್ಸಿಯನ್ನು ಪ್ರತಿಸ್ಫರ್ಧಿ ಎಂದು ಪರಿಗಣಿಸಿಯೇ ಇಲ್ಲ. ನಮ್ಮ ನಿಜವಾದ ಪ್ರತಿಸ್ಫರ್ಧಿ ಎಂದರೆ ನೀರು' -ಕೋಕೋ ಕೋಲಾ ಕಂಪೆನಿಯ ರಿಚರ್ಡ್ ನಿಕೊಲ್ಸನ್.