ಪ್ರ: ಬ್ಯಾಂಕಿನ ಕ್ಯಾಷಿಯರ್ ನಗುವುದಿಲ್ಲವೇಕೆ?
ಉ: ಕೌಂಟರಿನ ಮೇಲೆ ಬೋರ್ಡ್ ಹಾಕಿದ್ದಾರೆ `ನಗದು' ಎಂದು.
Vishva Kannada
ರಾಜಕಾರಣ ಪ್ರವೇಶ ಮಾಡುತ್ತಿದ್ದ ಮಗನಿಗೆ ಅಪ್ಪ ಹೇಳಿದ “ಮಗನೇ, ರಾಜಕಾರಣದಲ್ಲಿ ಪ್ರಾಮಾಣಿಕತೆ ಜತೆಗೆ ವಿವೇಚನೆ ಮುಖ್ಯ”
- ಪಂಜೆ ಮಂಗೇಶ ರಾವ್
ನಾಗರ ಹಾವೆ! ಹಾವೊಳು ಹೂವೆ!
ಬಾಗಿಲ ಬಿಲದಲಿ ನಿನ್ನಯ ಠಾವೆ?
ಕೈಗಳ ಮುಗಿವೆ, ಹಾಲನ್ನೀವೆ
- ಹುಯಿಲಗೋಳ ನಾರಾಯಣರಾವ್
ಉದಯವಾಗಲಿ ನಮ್ಮ ಚೆಲುವ ಕನ್ನಡನಾಡು
ಬದುಕು ಬಲುಹಿನ ನಿಧಿಯು ಸದಭಿಮಾನದ ಗೂಡು.
- ಡಿ. ಎಸ್. ಕರ್ಕಿ
ಹಚ್ಚೇವು ಕನ್ನಡದ ದೀಪ
ಕರುನಾಡದೀಪ ಸಿರಿನುಡಿಯದೀಪ
ಒಲವೆತ್ತಿ ತೋರುವಾ ದೀಪ | ಹಚ್ಚೇವು |
- ಡಾ| ಸಿ. ಆರ್. ಚಂದ್ರಶೇಖರ್
ಉದ್ಯೋಗವನ್ನೂ, ಒಳ್ಳೆಯ ಭವಿಷ್ಯವನ್ನೂ ಅರಸುತ್ತಾ, ತಾಯ್ನಾಡನ್ನು ಬಿಟ್ಟು, ಹೊರದೇಶಗಳಿಗೆ ಹೋಗುವ ಭಾರತೀಯರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಪ್ರತಿಭೆಗೆ ಮನ್ನಣೆ, ಕೈತುಂಬಾ ಸಂಬಳ, ಉತ್ತಮ ಮಟ್ಟದ ಜೀವನ ವಿಧಾನಗಳಿರುವ ವಿದೇಶಗಳಲ್ಲಿರುವ ಭಾರತೀಯರು ಸಂತೋಷ, ತೃಪ್ತಿಯಿಂದ ಇರುವರು ಎಂದು ಹೇಳಲಾದೀತೇ? `ನಾವು ಕನಸು ಮನಸಿನಲ್ಲಿ ಊಹಿಸಲಾಗದಷ್ಟು ವೈಭೋಗವನ್ನು ಇಲ್ಲಿ ಕಂಡಿದ್ದೇವೆ. ಹಣವಿದೆ. ಸುಖಕೊಡುವ ವಸ್ತುಗಳಿವೆ. ವಿಸ್ಮಯ ಪಡುವ ವೈಜ್ಞಾನಿಕ ಸಲಕರಣೆಗಳಿವೆ. ಆದರೇನು ಮನಸ್ಸಿಗೆ ನೆಮ್ಮದಿ ಇಲ್ಲ. ಏನೋ ಅತೃಪ್ತಿ ನಮ್ಮನ್ನೂ ಕಾಡುತ್ತದೆ' ಎಂದು ವಿದೇಶಗಳಲ್ಲಿರುವ ಭಾರತೀಯರು ಹೇಳುತ್ತಾರೆ. ಅನೇಕ ರೀತಿಯ ಮಾನಸಿಕ ಒತ್ತಡಗಳು ಅವರನ್ನೂ ಕಾಡುತ್ತವೆ. ಉದಾಹರಣೆಗೆ-
- ಮರ್ಕಟ
ಭಾರತೀಯ ರೈಲುಗಳನ್ನು ಆಕರ್ಷಕಗೊಳಿಸಲು ಅವುಗಳಿಗೆ ವಿವಿಧ ಬಣ್ಣಗಳನ್ನು ಬಳಿಯಲಾಗುವುದು ಎಂದು ರೈಲು ಮಂತ್ರಿಗಳು ಹೇಳಿದ್ದಾರೆ.
- ಮರ್ಕಟ
ಸ್ವಾತಂತ್ರೊ ತ್ಸವದ ೫೦ನೆಯ ವರ್ಧಂತಿ.
೫೦ ವರ್ಷಗಳ ಅನಂತರವೂ ಪರಿಸ್ಥಿತಿಯಲ್ಲಿ ಹೆಚ್ಚು ವ್ಯತ್ಯಾಸವಿಲ್ಲ. ಅಂದೂ ನಮ್ಮ ನಾಯಕರು ಕಾರಾಗೃಹದಲ್ಲಿದ್ದರು. ಇಂದೂ ನಮ್ಮ ಕೆಲವು ನಾಯಕರು ಕಾರಾಗೃಹದಲ್ಲಿದ್ದಾರೆ.
ಕನ್ನಡಪ್ರಭ ಪತ್ರಿಕೆಯಲ್ಲಿ ಖ್ಯಾತ ವಿಜ್ಞಾನ ಲೇಖಕರು ಹಾಗೂ ಅತ್ಮೀಯರೂ ಆದ ಹಾಲ್ದೊಡ್ಡೇರಿ ಸುಧೀಂದ್ರ ಅವರ ಅಂಕಣ ಪ್ರತಿ ಭಾನುವಾರ ಇದೆ. ಇಂದಿನ ಅಂಕಣದಲ್ಲಿ ಆವರು ಬರೆಯುತ್ತಾರೆ -"ಭಾರತದ ಎಲ್ಲ ಪ್ರತಿಭಾನ್ವಿತರಂತೆ ಉನ್ನತ ವ್ಯಾಸಂಗಕ್ಕೆಂದು ಅಮೆರಿಕಾಕ್ಕೆ ತೆರಳಿ ಅಲ್ಲಿಯೇ ಉಳಿದು ಮತ್ತಷ್ಟು ಕೀರ್ತಿ ಸಂಪಾದಿಸಿದವ". ಇಲ್ಲಿ ಅವರು ಹೇಳುತ್ತಿರುವುದು ಅಮೇರಿಕಾದಲ್ಲಿರುವ ಒಬ್ಬ ಭಾರತೀಯ ಸಂಜಾತ ವಿಜ್ಞಾನಿಯ ಬಗ್ಗೆ. ಸುಧೀಂದ್ರರ ಪ್ರಕಾರ ಅಮೇರಿಕಾಕ್ಕೆ ತೆರಳದೆ ಇಲ್ಲೇ ಉಳಿದಿರುವ ನಾವು ಯಾರೂ ಪ್ರತಿಭಾನ್ವಿತರಲ್ಲ.
