Press "Enter" to skip to content

ಕೃಷ್ಣ ನೀ ಬೇಗನೆ ಬಾರೋ

ಶ್ರೀ ವ್ಯಾಸರಾಯರು

ಕೃಷ್ಣ ನೀ ಬೇಗನೆ ಬಾರೋ
ಬೇಗನೆ ಬಾರೋ ಮುಖವನ್ನೆ ತೋರೋ
ಕಾಲಲಂದುಗೆ ಗೆಜ್ಜೆ ನೀಲದ ಬಾವುಲಿ
ನೀಲವರ್ಣನೆ ನಾಟ್ಯವಾಡುತ ಬಾರೋ
ಉಡಿಯಲ್ಲಿ ಉರಿಗೆಜ್ಜೆ ಬೆರಳಲ್ಲಿ ಉಂಗುರ
ಕೊರಳೊಳು ಧರಿಸಿದ ವೈಜಯಂತಿ ಮಾಲೆ
ಕಾಶಿಪೀತಾಂಬರ ಕೈಯಲ್ಲಿ ಕೊಳಲು
ಪೂಸಿದ ಶ್ರೀಗಂಧ ಮೈಯೊಳಗಮ್ಮ
ತಾಯಿಗೆ ಬಾಯಲ್ಲಿ ಜಗವನ್ನೆ ತೋರಿದ
ಜಗದೋದ್ಧಾರಕ ನಮ್ಮ ಉಡುಪಿ ಶ್ರೀಕೃಷ್ಣ

Be First to Comment

Leave a Reply

Your email address will not be published. Required fields are marked *